50ಕ್ಕೂ ಅಧಿಕ ಮನೆಗಳಿರುವ ಆದರ್ಶ ನಗರದಲ್ಲಿ ಮೂಲಭೂತ ಸೌಕರ್ಯಗಳೇ ಮರೆಯಾಗಿದೆ. ಇಲ್ಲಿನ ರಸ್ತೆಗಳಿಗೆ ಡಾಂಬರ್, ಕಾಂಕ್ರೀಟ್ ಭಾಗ್ಯವೇ ಇಲ್ಲ. ಚರಂಡಿ ವ್ಯವಸ್ಥೆ ಇಲ್ಲವೇ ಇಲ್ಲ. ಗ್ರಾಮ ಪಂಚಾಯ್ತಿಗೆ ತೆರಿಗೆ ಕಟ್ಟುತ್ತಿದ್ದರು ಮೂಲ ಸೌಕರ್ಯ ಮರಿಚೀಕೆಯಾಗಿದೆ. ಇಲ್ಲಿನ ರಸ್ತೆಯಲ್ಲಿ ಮಳೆಗಾಲದಲ್ಲಿ ನಡೆದಾಡಲು ಸಾಧ್ಯವಿರುವುದಿಲ್ಲ. ಬೇಸಿಗೆಯಲ್ಲಿ ಮನೆಯ ಹೊರಗಡೆ ಯಾವ ವಸ್ತುಗಳನ್ನು ಒಣಗಿಸಲು ಸಾಧ್ಯವಿಲ್ಲ. ಇಲ್ಲಿನ ನಿವಾಸಿಗಳ ಸಂಕಷ್ಟ ಯಾರಿಗೂ ಹೇಳುವ ಆಗಿಲ್ಲ. ಹಾಗಾಗಿ 2023ರ ವಿಧಾನಸಭೆಯ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರ ಮಾಡಲಾಗಿದೆ.ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಬ್ಯಾನರ್ ಅನ್ನು ಆದರ್ಶನಗರದಲ್ಲಿ ಕಟ್ಟಿದ್ದಾರೆ.