<p><strong>ಕಾರವಾರ: ‘</strong>ಮಾದಕ ದ್ರವ್ಯಗಳ ಸೇವನೆಯಂತೆ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯೂ ಕೆಟ್ಟ ವ್ಯಸನವಾಗಿದೆ. ಯುವ ಜನತೆ ಇವುಗಳಿಂದ ದೂರ ಇದ್ದರೆ ಸಮಾಜಕ್ಕೆ ಕ್ಷೇಮ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾಂತ ಶಿವಯೋಗಿ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಮಾಜಿಕ ಮಾಧ್ಯಮಗಳಲ್ಲೇ ಕಾಲ ಕಳೆಯುತ್ತ ಒಬ್ಬಂಟಿತನ ಅನುಭವಿಸುವುದನ್ನು ಬಿಟ್ಟು ಹೊರಬನ್ನಿ, ಪಾಲಕರು, ಸುತ್ತಲಿನ ಸಮುದಾಯದೊಂದಿಗೆ ಬೆರೆತು ವ್ಯಕ್ತಿತ್ವ ರೂಪಿಸಿಕೊಳ್ಳಿ. ದುಶ್ಚಟಗಳ ವಿರುದ್ಧ ಜಾಗೃತಿಗೆ ಜೋಳಿಗೆ ಹಿಡಿದು ಭಿಕ್ಷೆ ಬೇಡುತ್ತಿದ್ದ ಶಿವಯೋಗಿ ಸ್ವಾಮೀಜಿ ಅವರಂತಹ ಸಾಧಕರ ಸಂದೇಶಗಳನ್ನು ಪಾಲಿಸಿ’ ಎಂದರು.</p>.<p>ಉಪನ್ಯಾಸ ನೀಡಿದ ಕ್ರಿಮ್ಸ್ ಮನೋ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ ಅಕ್ಷಯ ಪಾಟಕ್, ‘ವ್ಯಸನವು ಕೇವಲ ದೈಹಿಕವಾದ ಚಟವಲ್ಲ ಅದು ಮೆದುಳಿನ ಕಾಯಿಲೆಯಾಗಿದೆ. ವಿದ್ಯಾರ್ಥಿಗಳು ಕುತೂಹಲ ಮತ್ತು ಮನರಂಜನೆಗೆ ಎಂದು ಪ್ರಾರಂಭಿಸುವ ದುಶ್ಚಟಗಳು ಮುಂದೆ ವ್ಯಸನವಾಗಿ ಮಾರ್ಪಾಡಾಗುತ್ತವೆ’ ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವೀಂದ್ರ ಬಿರಾದರ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರಮೇಶ ಪತ್ರೆಕರ ಅಧ್ಯಕ್ಷತೆ ವಹಿಸಿದ್ದರು. ವ್ಯಸನ ಮುಕ್ತರಾಗಿ ಉತ್ತಮ ಜೀವನ ನಡೆಸುತ್ತಿರುವ ವ್ಯಸನ ಮುಕ್ತರನ್ನು ಸನ್ಮಾನಿಸಲಾಯಿತು. </p>.<p>ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್, ಇತರರು ಇದ್ದರು. ವನಿತಾ ಶೇಟ್ ನಿರೂಪಿಸಿದರು, ಉಪನ್ಯಾಸಕಿ ಪೂಜಾ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: ‘</strong>ಮಾದಕ ದ್ರವ್ಯಗಳ ಸೇವನೆಯಂತೆ ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯೂ ಕೆಟ್ಟ ವ್ಯಸನವಾಗಿದೆ. ಯುವ ಜನತೆ ಇವುಗಳಿಂದ ದೂರ ಇದ್ದರೆ ಸಮಾಜಕ್ಕೆ ಕ್ಷೇಮ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾಂತ ಶಿವಯೋಗಿ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಾಮಾಜಿಕ ಮಾಧ್ಯಮಗಳಲ್ಲೇ ಕಾಲ ಕಳೆಯುತ್ತ ಒಬ್ಬಂಟಿತನ ಅನುಭವಿಸುವುದನ್ನು ಬಿಟ್ಟು ಹೊರಬನ್ನಿ, ಪಾಲಕರು, ಸುತ್ತಲಿನ ಸಮುದಾಯದೊಂದಿಗೆ ಬೆರೆತು ವ್ಯಕ್ತಿತ್ವ ರೂಪಿಸಿಕೊಳ್ಳಿ. ದುಶ್ಚಟಗಳ ವಿರುದ್ಧ ಜಾಗೃತಿಗೆ ಜೋಳಿಗೆ ಹಿಡಿದು ಭಿಕ್ಷೆ ಬೇಡುತ್ತಿದ್ದ ಶಿವಯೋಗಿ ಸ್ವಾಮೀಜಿ ಅವರಂತಹ ಸಾಧಕರ ಸಂದೇಶಗಳನ್ನು ಪಾಲಿಸಿ’ ಎಂದರು.</p>.<p>ಉಪನ್ಯಾಸ ನೀಡಿದ ಕ್ರಿಮ್ಸ್ ಮನೋ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕ ಅಕ್ಷಯ ಪಾಟಕ್, ‘ವ್ಯಸನವು ಕೇವಲ ದೈಹಿಕವಾದ ಚಟವಲ್ಲ ಅದು ಮೆದುಳಿನ ಕಾಯಿಲೆಯಾಗಿದೆ. ವಿದ್ಯಾರ್ಥಿಗಳು ಕುತೂಹಲ ಮತ್ತು ಮನರಂಜನೆಗೆ ಎಂದು ಪ್ರಾರಂಭಿಸುವ ದುಶ್ಚಟಗಳು ಮುಂದೆ ವ್ಯಸನವಾಗಿ ಮಾರ್ಪಾಡಾಗುತ್ತವೆ’ ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವೀಂದ್ರ ಬಿರಾದರ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರಮೇಶ ಪತ್ರೆಕರ ಅಧ್ಯಕ್ಷತೆ ವಹಿಸಿದ್ದರು. ವ್ಯಸನ ಮುಕ್ತರಾಗಿ ಉತ್ತಮ ಜೀವನ ನಡೆಸುತ್ತಿರುವ ವ್ಯಸನ ಮುಕ್ತರನ್ನು ಸನ್ಮಾನಿಸಲಾಯಿತು. </p>.<p>ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್, ಇತರರು ಇದ್ದರು. ವನಿತಾ ಶೇಟ್ ನಿರೂಪಿಸಿದರು, ಉಪನ್ಯಾಸಕಿ ಪೂಜಾ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>