<p><strong>ಶಿರಸಿ:</strong> ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಮನೆಮನೆ ಕಸ ಸಂಗ್ರಹಣೆ ಉದ್ದೇಶಕ್ಕೆ ಹೆಚ್ಚುವರಿ ಮೂರು ಕಸ ವಿಲೆವಾರಿ ವಾಹನಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ಈಗಾಗಲೇ 14 ಕಸ ವಿಲೇವಾರಿ ವಾಹನಗಳು ಕೆಲಸ ಮಾಡುತ್ತಿದೆ. ಇದೀಗ ಮತ್ತೆ 3 ವಾಹನಗಳು ಸೇರ್ಪಡೆಗೊಂಡಿದೆ. ನಗರದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಆಗದಂತೆ ನಗರಸಭೆ ಕೆಲಸ ಮಾಡುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಗರಾಡಳಿತವು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.</p>.<p>ಎಲ್ಲಿಯೂ ಕಳಪೆ ಕಾಮಗಾರಿ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಉಳಿದ ಕಾಮಗಾರಿಗಳನ್ನು ಮಳೆಗಾಲದ ನಂತರ ಮಾಡಲಾಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ನಗರಸಭೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕಸದ ಗುಡ್ಡೆಯಲ್ಲಿ ಬೆಂಕಿ ಅನಾಹುತಗಳು ಆಗದಂತೆ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತದೆ ಎಂದರು.</p>.<p>ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ್ ಭಟ್, ಪ್ರಭಾರಿ ಪೌರಾಯುಕ್ತ ಶಿವರಾಜ, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಮನೆಮನೆ ಕಸ ಸಂಗ್ರಹಣೆ ಉದ್ದೇಶಕ್ಕೆ ಹೆಚ್ಚುವರಿ ಮೂರು ಕಸ ವಿಲೆವಾರಿ ವಾಹನಗಳಿಗೆ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ಈಗಾಗಲೇ 14 ಕಸ ವಿಲೇವಾರಿ ವಾಹನಗಳು ಕೆಲಸ ಮಾಡುತ್ತಿದೆ. ಇದೀಗ ಮತ್ತೆ 3 ವಾಹನಗಳು ಸೇರ್ಪಡೆಗೊಂಡಿದೆ. ನಗರದಲ್ಲಿ ಕಸ ವಿಲೇವಾರಿಗೆ ಸಮಸ್ಯೆ ಆಗದಂತೆ ನಗರಸಭೆ ಕೆಲಸ ಮಾಡುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಗರಾಡಳಿತವು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ ಎಂದರು.</p>.<p>ಎಲ್ಲಿಯೂ ಕಳಪೆ ಕಾಮಗಾರಿ ಆಗದಂತೆ ನೋಡಿಕೊಳ್ಳುತ್ತಿದ್ದೇವೆ. ಉಳಿದ ಕಾಮಗಾರಿಗಳನ್ನು ಮಳೆಗಾಲದ ನಂತರ ಮಾಡಲಾಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ನಗರಸಭೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕಸದ ಗುಡ್ಡೆಯಲ್ಲಿ ಬೆಂಕಿ ಅನಾಹುತಗಳು ಆಗದಂತೆ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತದೆ ಎಂದರು.</p>.<p>ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ್ ಭಟ್, ಪ್ರಭಾರಿ ಪೌರಾಯುಕ್ತ ಶಿವರಾಜ, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>