<p><strong>ಅಂಕೋಲಾ</strong>: ಏಡ್ಸ್ ಒಂದು ಮಹಾಮಾರಿ ರೋಗವಾಗಿದ್ದು, ಅದನ್ನು ತಡೆಗಟ್ಟುವುದೇ ನಮ್ಮೆಲ್ಲರ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಏಡ್ಸ್ ರೋಗದ ಕುರಿತು ಜನಜಾಗೃತಿ ಮೂಡಿಸಬೇಕು’ ಎಂದು ಮುಖ್ಯಶಿಕ್ಷಕ ಚಂದ್ರಶೇಖರ ಕಡೇಮನಿ ಹೇಳಿದರು.</p>.<p>ಪಟ್ಟಣದ ಕೆನರಾ ವೆಲ್ಫೇರ್ ಟ್ರಸ್ಟ್ನ ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕದ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಸೋಮವಾರ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎನ್.ಸಿ.ಸಿ ಕಮಾಂಡರ್ ಜಿ.ಆರ್.ತಾಂಡೇಲ ಪ್ರಾಸ್ತಾವಿಕ ಮಾತನಾಡಿ, ಏಡ್ಸ್ ರೋಗದ ಕುರಿತು ಅನೇಕ ವರ್ಷಗಳಿಂದ ಎನ್.ಸಿ.ಸಿ ಘಟಕದ ವತಿಯಿಂದ ಅರಿವು ಮೂಡಿಸಲಾಗುತ್ತಿದೆ. ಎನ್.ಸಿ.ಸಿ ಕೆಡೆಟ್ಗಳು ಏಡ್ಸ್ ರೋಗದ ಬಗ್ಗೆ ಅಧ್ಯಯನ ನಡೆಸಿ, ಆ ರೋಗವನ್ನು ತಡೆಗಟ್ಟುವುದರ ಕುರಿತು ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.</p>.<p>ಹಿರಿಯ ಶಿಕ್ಷಕಿ ನಯನಾ ನಾಯಕ, ಮಗುದುಮ್ ಅಲಗೋಡಿ, ಗಣೇಶ ಭಟ್ಟ, ರೇಷ್ಮಾ ಮನಕಾಮೆ, ರಾಜೇಶ ನಾಯಕ, ಸಾರ್ಜೆಂಟ್ ನಿತಿನ್ ನಾಯ್ಕ ಅಮಯ ಗಿರಫ್, ರಜತ ನಾಯ್ಕ, ಹಾಗೂ ಎನ್.ಸಿ.ಸಿ. ಕೆಡೆಟ್ಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಏಡ್ಸ್ ಒಂದು ಮಹಾಮಾರಿ ರೋಗವಾಗಿದ್ದು, ಅದನ್ನು ತಡೆಗಟ್ಟುವುದೇ ನಮ್ಮೆಲ್ಲರ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಏಡ್ಸ್ ರೋಗದ ಕುರಿತು ಜನಜಾಗೃತಿ ಮೂಡಿಸಬೇಕು’ ಎಂದು ಮುಖ್ಯಶಿಕ್ಷಕ ಚಂದ್ರಶೇಖರ ಕಡೇಮನಿ ಹೇಳಿದರು.</p>.<p>ಪಟ್ಟಣದ ಕೆನರಾ ವೆಲ್ಫೇರ್ ಟ್ರಸ್ಟ್ನ ಪಿ.ಎಂ.ಹೈಸ್ಕೂಲ್ನ ಎನ್.ಸಿ.ಸಿ ಘಟಕದ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಸೋಮವಾರ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಎನ್.ಸಿ.ಸಿ ಕಮಾಂಡರ್ ಜಿ.ಆರ್.ತಾಂಡೇಲ ಪ್ರಾಸ್ತಾವಿಕ ಮಾತನಾಡಿ, ಏಡ್ಸ್ ರೋಗದ ಕುರಿತು ಅನೇಕ ವರ್ಷಗಳಿಂದ ಎನ್.ಸಿ.ಸಿ ಘಟಕದ ವತಿಯಿಂದ ಅರಿವು ಮೂಡಿಸಲಾಗುತ್ತಿದೆ. ಎನ್.ಸಿ.ಸಿ ಕೆಡೆಟ್ಗಳು ಏಡ್ಸ್ ರೋಗದ ಬಗ್ಗೆ ಅಧ್ಯಯನ ನಡೆಸಿ, ಆ ರೋಗವನ್ನು ತಡೆಗಟ್ಟುವುದರ ಕುರಿತು ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.</p>.<p>ಹಿರಿಯ ಶಿಕ್ಷಕಿ ನಯನಾ ನಾಯಕ, ಮಗುದುಮ್ ಅಲಗೋಡಿ, ಗಣೇಶ ಭಟ್ಟ, ರೇಷ್ಮಾ ಮನಕಾಮೆ, ರಾಜೇಶ ನಾಯಕ, ಸಾರ್ಜೆಂಟ್ ನಿತಿನ್ ನಾಯ್ಕ ಅಮಯ ಗಿರಫ್, ರಜತ ನಾಯ್ಕ, ಹಾಗೂ ಎನ್.ಸಿ.ಸಿ. ಕೆಡೆಟ್ಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>