<p><strong>ಯಲ್ಲಾಪುರ:</strong> ದಾಂಡೇಲಿಯ ವಕೀಲ ಅಜಿತ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಾಂಡುರಂಗ ಮಾರುತಿ ಕಾಂಬಳೆ ವಿರುದ್ಧ ಆರೋಪ ಸಾಬೀತಾಗಿದ್ದು, ಆತನನ್ನು ಅಪರಾಧಿ ಎಂದು ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಘೋಷಿಸಿದೆ.</p>.<p>ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಯಲ್ಲಾಪುರ ಪೀಠದಿಂದ ಶುಕ್ರವಾರ ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಜ.13ರಂದು ಪ್ರಕಟಿಸಲು ನ್ಯಾಯಾಲಯ ನಿರ್ಧರಿಸಿದೆ. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಉಳಿದ ನಾಲ್ವರನ್ನು ಸಾಕ್ಷಿ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.</p>.<p>ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅಜಿತ ನಾಯಕ ವಕಾಲತ್ತು ನಡೆಸಿದ್ದಕ್ಕೆ ಕೋಪಗೊಂಡಿದ್ದ ಪಾಂಡುರoಗ ಕಾಂಬಳೆ ಕೊಲೆ ಮಾಡಿದ್ದಾಗಿ ಪ್ರಕರಣ ದಾಖಲಾಗಿತ್ತು. 2018ರ ಜು.27ರಂದು ದಾಂಡೇಲಿ ನಗರದಲ್ಲಿ ಹತ್ಯೆ ನಡೆದಿತ್ತು.</p>.<p>ಅಪರಾಧಿಗೆ ನೆರವಾಗಿದ್ದ ಆರೋಪ ಹೊತ್ತಿದ್ದ ವಿನಾಯಕ ಕರ್ನಿಂಗ್, ಇ.ಎಲ್.ಮಂಜುನಾಥ, ನಜೀರ ಅಹ್ಮದ್ ಲಾಲುಸಾಬ್ ಜಮಾಲಿ ಹಾಗೂ ಈಶ್ವರ ಶೆಟ್ಟಿಯಾರ್ ಖುಲಾಸೆಗೊಂಡಿದ್ದಾರೆ.</p>.<p>ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ವಾದಿಸಿದ್ದರು. ಈ ಪ್ರಕರಣದ ಬಗ್ಗೆ ಆಗಿನ ಪಿಐ ಎ.ಎ.ಮುಜಾವರ್ ತನಿಖೆ ನಡೆಸಿದ್ದರು. ಪಿ.ಸಿ.ಮಂಜುನಾಥ ಎಚ್ ಶೆಟ್ಟಿ ಸಹಾಯಕ ತನಿಖಾಧಿಕಾರಿಯಾಗಿ ಕೆಲಸ ಮಾಡಿದರು. ನಂತರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಸಿಐಡಿ ಕೂಡ ತನಿಖೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ದಾಂಡೇಲಿಯ ವಕೀಲ ಅಜಿತ ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಾಂಡುರಂಗ ಮಾರುತಿ ಕಾಂಬಳೆ ವಿರುದ್ಧ ಆರೋಪ ಸಾಬೀತಾಗಿದ್ದು, ಆತನನ್ನು ಅಪರಾಧಿ ಎಂದು ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಘೋಷಿಸಿದೆ.</p>.<p>ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಯಲ್ಲಾಪುರ ಪೀಠದಿಂದ ಶುಕ್ರವಾರ ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಜ.13ರಂದು ಪ್ರಕಟಿಸಲು ನ್ಯಾಯಾಲಯ ನಿರ್ಧರಿಸಿದೆ. ಪ್ರಕರಣದಲ್ಲಿ ಆರೋಪಿಗಳಾಗಿದ್ದ ಉಳಿದ ನಾಲ್ವರನ್ನು ಸಾಕ್ಷಿ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.</p>.<p>ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅಜಿತ ನಾಯಕ ವಕಾಲತ್ತು ನಡೆಸಿದ್ದಕ್ಕೆ ಕೋಪಗೊಂಡಿದ್ದ ಪಾಂಡುರoಗ ಕಾಂಬಳೆ ಕೊಲೆ ಮಾಡಿದ್ದಾಗಿ ಪ್ರಕರಣ ದಾಖಲಾಗಿತ್ತು. 2018ರ ಜು.27ರಂದು ದಾಂಡೇಲಿ ನಗರದಲ್ಲಿ ಹತ್ಯೆ ನಡೆದಿತ್ತು.</p>.<p>ಅಪರಾಧಿಗೆ ನೆರವಾಗಿದ್ದ ಆರೋಪ ಹೊತ್ತಿದ್ದ ವಿನಾಯಕ ಕರ್ನಿಂಗ್, ಇ.ಎಲ್.ಮಂಜುನಾಥ, ನಜೀರ ಅಹ್ಮದ್ ಲಾಲುಸಾಬ್ ಜಮಾಲಿ ಹಾಗೂ ಈಶ್ವರ ಶೆಟ್ಟಿಯಾರ್ ಖುಲಾಸೆಗೊಂಡಿದ್ದಾರೆ.</p>.<p>ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ವಾದಿಸಿದ್ದರು. ಈ ಪ್ರಕರಣದ ಬಗ್ಗೆ ಆಗಿನ ಪಿಐ ಎ.ಎ.ಮುಜಾವರ್ ತನಿಖೆ ನಡೆಸಿದ್ದರು. ಪಿ.ಸಿ.ಮಂಜುನಾಥ ಎಚ್ ಶೆಟ್ಟಿ ಸಹಾಯಕ ತನಿಖಾಧಿಕಾರಿಯಾಗಿ ಕೆಲಸ ಮಾಡಿದರು. ನಂತರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಸಿಐಡಿ ಕೂಡ ತನಿಖೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>