ಈ ಸಂಬಂಧ ಸುದ್ದಿಗಾರರಿಗೆ ವಿಡಿಯೊ ಸಂದೇಶ ಕಳುಹಿಸಿರುವ ಅವರು, ‘ಎಲ್ಲ ಪರಿಸರವಾದಿಗಳ ಹಿನ್ನೆಲೆ ನನಗೆ ಗೊತ್ತಿದೆ. ನ್ಯಾಯಬದ್ಧವಾಗಿ ಒಂದು ಎಕರೆ ಜಮೀನು ತಮ್ಮದಿದ್ದರೆ, ಅನಧಿಕೃತವಾಗಿ ಹತ್ತಾರು ಎಕರೆಗಳನ್ನು ಕಬಳಿಸಿದ್ದೀರಿ. ಈ ಯೋಜನೆ ವಿರುದ್ಧ ಒಂದುವೇಳೆ ನೀವು ನ್ಯಾಯಾಲಯದ ಮೆಟ್ಟಿಲೇರಿದರೆ, ನಾನು ವೈಯಕ್ತಿಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.