ಅಂಕೋಲಾ: ತೋಟದಲ್ಲಿ ಕೊಯ್ದಿಟ್ಟ ಅಡಿಕೆ ಗೊನೆಗಳನ್ನು ಕಳ್ಳರು ಕದ್ದೊಯ್ದ ಘಟನೆ ತಾಲ್ಲೂಕಿನ ಕೊಡ್ಲಗದ್ದೆಯಲ್ಲಿ ನಡೆದಿದೆ.
ಇಲ್ಲಿನ ರಾಮಕೃಷ್ಣ ವಿಶ್ವೇಶ್ವರ ಹೆಗಡೆ ಅವರ ಅಡಿಕೆ ತೋಟದಲ್ಲಿ ಗೊನೆಗಳನ್ನು ಕೊಯ್ದು ಒಣಗಿಸಲು ಇಟ್ಟಿದ್ದರು. ಸುಮಾರು ₹ 35000 ಮೌಲ್ಯದ 10 ಚೀಲ ಅಡಿಕೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಕುರಿತು ಭಾನುವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೋಮವಾರ ಎಸ್ಐ ಪ್ರೇಮನ ಗೌಡ ಪಾಟೀಲ್ ನೇತೃತ್ವದಲ್ಲಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾರವಾರದಿಂದ ತನಿಖೆಗೆ ಪೂರಕವಾಗಿ ಶ್ವಾನದಳ ಕರೆ ತರಲಾಗಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.