<p><strong>ಅಂಕೋಲಾ:</strong> ತಾಲ್ಲೂಕಿನ ಬೇಲೆಕೇರಿ ಬಂದರಿನಲ್ಲಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿತ್ತು. ಇದರ ಬೆನ್ನಲ್ಲೇ ಶುಕ್ರವಾರ ರಾತ್ರಿ ಮತ್ತೊಂದು ಮೀನುಗಾರಿಕಾ ದೋಣಿ ಮುಳುಗಿದ್ದು, ಇದು ಸ್ಥಳೀಯ ಮೀನುಗಾರರಲ್ಲಿ ಆತಂಕ ಮೂಡಿಸಿದೆ.</p>.<p>ದುರ್ಗಾ ಪ್ರಸಾದ್ ಎಂಬ ಪರ್ಷಿಯನ್ ದೋಣಿ ಜಟ್ಟಿ ಬಳಿ ಬಂಡೆಗೆ ಡಿಕ್ಕಿ ಹೊಡೆದು ಮುಳುಗಿದೆ ಎಂದು ಪ್ರಾಥಮಿಕ ಮಾಹಿತಿಯ ಪ್ರಕಾರ ವರದಿಯಾಗಿದೆ. ದೋಣಿ ಶ್ರೀಕಾಂತ್ ತಾಂಡೆಲ್ ಅವರಿಗೆ ಸೇರಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಎಂದು ಅಂದಾಜಿಸಲಾಗಿದೆ.</p>.<p>ಬಂದರಿನಲ್ಲಿ ಹೂಳೆತ್ತುವ ಕಾರ್ಯದ ಕೊರತೆ ಮತ್ತು ಬ್ರೇಕ್ವಾಟರ್ ಇಲ್ಲದಿರುವುದು ಈ ಪ್ರದೇಶದ ದೋಣಿ ಮಾಲೀಕರಿಗೆ ತೀವ್ರ ಸವಾಲುಗಳನ್ನು ಒಡ್ಡುತ್ತಿದೆ. ಸಮುದ್ರದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ಪ್ರದೇಶದಲ್ಲಿ ದೋಣಿಗಳು ಮುಳುಗುವ ಘಟನೆಗಳು ಪುನರಾವರ್ತಿತವಾಗುತ್ತಿವೆ ಎಂದು ದೋಣಿ ಮಾಲೀಕರು ಆರೋಪಿಸಿದ್ದಾರೆ.</p>.<p>ಪ್ರತಿ ವರ್ಷ ನಾವು ನಷ್ಟ ಅನುಭವಿಸುತ್ತಲೇ ಇದ್ದೇವೆ. ಬಂದರು ಸುರಕ್ಷಿತವಾಗಿಲ್ಲ ಮತ್ತು ಸರ್ಕಾರವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯ ಮೀನುಗಾರರು ತಮ್ಮ ಹತಾಶೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ತಾಲ್ಲೂಕಿನ ಬೇಲೆಕೇರಿ ಬಂದರಿನಲ್ಲಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿತ್ತು. ಇದರ ಬೆನ್ನಲ್ಲೇ ಶುಕ್ರವಾರ ರಾತ್ರಿ ಮತ್ತೊಂದು ಮೀನುಗಾರಿಕಾ ದೋಣಿ ಮುಳುಗಿದ್ದು, ಇದು ಸ್ಥಳೀಯ ಮೀನುಗಾರರಲ್ಲಿ ಆತಂಕ ಮೂಡಿಸಿದೆ.</p>.<p>ದುರ್ಗಾ ಪ್ರಸಾದ್ ಎಂಬ ಪರ್ಷಿಯನ್ ದೋಣಿ ಜಟ್ಟಿ ಬಳಿ ಬಂಡೆಗೆ ಡಿಕ್ಕಿ ಹೊಡೆದು ಮುಳುಗಿದೆ ಎಂದು ಪ್ರಾಥಮಿಕ ಮಾಹಿತಿಯ ಪ್ರಕಾರ ವರದಿಯಾಗಿದೆ. ದೋಣಿ ಶ್ರೀಕಾಂತ್ ತಾಂಡೆಲ್ ಅವರಿಗೆ ಸೇರಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಎಂದು ಅಂದಾಜಿಸಲಾಗಿದೆ.</p>.<p>ಬಂದರಿನಲ್ಲಿ ಹೂಳೆತ್ತುವ ಕಾರ್ಯದ ಕೊರತೆ ಮತ್ತು ಬ್ರೇಕ್ವಾಟರ್ ಇಲ್ಲದಿರುವುದು ಈ ಪ್ರದೇಶದ ದೋಣಿ ಮಾಲೀಕರಿಗೆ ತೀವ್ರ ಸವಾಲುಗಳನ್ನು ಒಡ್ಡುತ್ತಿದೆ. ಸಮುದ್ರದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ಪ್ರದೇಶದಲ್ಲಿ ದೋಣಿಗಳು ಮುಳುಗುವ ಘಟನೆಗಳು ಪುನರಾವರ್ತಿತವಾಗುತ್ತಿವೆ ಎಂದು ದೋಣಿ ಮಾಲೀಕರು ಆರೋಪಿಸಿದ್ದಾರೆ.</p>.<p>ಪ್ರತಿ ವರ್ಷ ನಾವು ನಷ್ಟ ಅನುಭವಿಸುತ್ತಲೇ ಇದ್ದೇವೆ. ಬಂದರು ಸುರಕ್ಷಿತವಾಗಿಲ್ಲ ಮತ್ತು ಸರ್ಕಾರವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯ ಮೀನುಗಾರರು ತಮ್ಮ ಹತಾಶೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>