<p><strong>ಅಂಕೋಲಾ</strong>: ಪಟ್ಟಣದಲ್ಲಿ ಹಿಂದೂ ಉತ್ಸವ ಸಮಿತಿಯಿಂದ 3ನೇ ವರ್ಷದ ಹಿಂದೂ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ ಜನವರಿ 23ರಂದು ನಡೆಯಲಿದೆ ಎಂದು ಹಿಂದೂ ಉತ್ಸವ ಸಮಿತಿ ಪ್ರಮುಖ ಸುನೀಲ ನಾಯ್ಕ ಹೊನ್ನೇಕೇರಿ ಹೇಳಿದರು.</p>.<p>ಪಟ್ಟಣದ ಖಾಸಗಿ ಹೊಟೇಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ರಕ್ಷಣೆ ಉದ್ದೇಶದಿಂದ ರಾಮಚಂದ್ರನ ಜನ್ಮಸ್ಥಾನ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾದ ಪುಣ್ಯದಿನದ ಮರುದಿನ ಅಂದರೆ ಜ.23ರಂದು ಅಂಕೋಲಾದಲ್ಲಿ ಹಿಂದೂ ಉತ್ಸವ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದರು.</p>.<p>ಹಿಂದೂ ಉತ್ಸವದಲ್ಲಿ ಯಾವುದೇ ರಾಜಕೀಯ ಪಕ್ಷವಿಲ್ಲ, ಸಮಾಜದ ಎಲ್ಲ ವರ್ಗದ ಜನರು ಈ ಉತ್ಸವದಲ್ಲಿ ಪಾಲ್ಗೊಂಡು ಹಿಂದೂ ಧರ್ಮದ ಪ್ರಾಮುಖ್ಯತೆ ಮರೆಯಬೇಕು. ಹಿಂದೂ ಉತ್ಸವದಲ್ಲಿ ಎಲ್ಲ ಸಮಾಜದವರಿಗೂ ಸಮಾನ ಅವಕಾಶವಿದೆ. ಹೀಗಾಗಿ ತಾಲ್ಲೂಕಿನ ಎಲ್ಲ ಹಿಂದೂ ಬಾಂಧವರು ಈ ಉತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಹಿಂದೂ ಉತ್ಸವ ಸಮಿತಿಯನ್ನು ನೋಂದಣಿ ಮಾಡಿಸಿ ಹಿಂದೂ ಬಾಂಧವರ ಸಹಕಾರದಲ್ಲಿ ಅಂಕೋಲಾದಲ್ಲಿ ಬಡ ಹಿಂದೂಗಳು ಉಪಯೋಗಕ್ಕಾಗಿ ಹಿಂದೂಭವನ ನಿರ್ಮಾಣ ಮತ್ತು ಗೋಶಾಲೆಯೊಂದನ್ನು ಪ್ರಾರಂಭಿಸುವ ಯೋಚನೆಯೂ ಇದೆ ಎಂದರು.</p>.<p>ಪ್ರಮುಖರಾದ ಸುಂದರ ಖಾರ್ವಿ, ಮಂಜುನಾಥ ನಾಯ್ಕ, ಮನೋಹರ ಗಾಂವಕರ, ಲಕ್ಷ್ಮೀಕಾಂತ ನಾಯ್ಕ, ಅಂಕಿತ ಬಂಟ, ಗಿರೀಶ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಪಟ್ಟಣದಲ್ಲಿ ಹಿಂದೂ ಉತ್ಸವ ಸಮಿತಿಯಿಂದ 3ನೇ ವರ್ಷದ ಹಿಂದೂ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ ಜನವರಿ 23ರಂದು ನಡೆಯಲಿದೆ ಎಂದು ಹಿಂದೂ ಉತ್ಸವ ಸಮಿತಿ ಪ್ರಮುಖ ಸುನೀಲ ನಾಯ್ಕ ಹೊನ್ನೇಕೇರಿ ಹೇಳಿದರು.</p>.<p>ಪಟ್ಟಣದ ಖಾಸಗಿ ಹೊಟೇಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ರಕ್ಷಣೆ ಉದ್ದೇಶದಿಂದ ರಾಮಚಂದ್ರನ ಜನ್ಮಸ್ಥಾನ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾದ ಪುಣ್ಯದಿನದ ಮರುದಿನ ಅಂದರೆ ಜ.23ರಂದು ಅಂಕೋಲಾದಲ್ಲಿ ಹಿಂದೂ ಉತ್ಸವ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದರು.</p>.<p>ಹಿಂದೂ ಉತ್ಸವದಲ್ಲಿ ಯಾವುದೇ ರಾಜಕೀಯ ಪಕ್ಷವಿಲ್ಲ, ಸಮಾಜದ ಎಲ್ಲ ವರ್ಗದ ಜನರು ಈ ಉತ್ಸವದಲ್ಲಿ ಪಾಲ್ಗೊಂಡು ಹಿಂದೂ ಧರ್ಮದ ಪ್ರಾಮುಖ್ಯತೆ ಮರೆಯಬೇಕು. ಹಿಂದೂ ಉತ್ಸವದಲ್ಲಿ ಎಲ್ಲ ಸಮಾಜದವರಿಗೂ ಸಮಾನ ಅವಕಾಶವಿದೆ. ಹೀಗಾಗಿ ತಾಲ್ಲೂಕಿನ ಎಲ್ಲ ಹಿಂದೂ ಬಾಂಧವರು ಈ ಉತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದರು.</p>.<p>ಹಿಂದೂ ಉತ್ಸವ ಸಮಿತಿಯನ್ನು ನೋಂದಣಿ ಮಾಡಿಸಿ ಹಿಂದೂ ಬಾಂಧವರ ಸಹಕಾರದಲ್ಲಿ ಅಂಕೋಲಾದಲ್ಲಿ ಬಡ ಹಿಂದೂಗಳು ಉಪಯೋಗಕ್ಕಾಗಿ ಹಿಂದೂಭವನ ನಿರ್ಮಾಣ ಮತ್ತು ಗೋಶಾಲೆಯೊಂದನ್ನು ಪ್ರಾರಂಭಿಸುವ ಯೋಚನೆಯೂ ಇದೆ ಎಂದರು.</p>.<p>ಪ್ರಮುಖರಾದ ಸುಂದರ ಖಾರ್ವಿ, ಮಂಜುನಾಥ ನಾಯ್ಕ, ಮನೋಹರ ಗಾಂವಕರ, ಲಕ್ಷ್ಮೀಕಾಂತ ನಾಯ್ಕ, ಅಂಕಿತ ಬಂಟ, ಗಿರೀಶ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>