<p><strong>ಅಂಕೋಲಾ</strong>: ತಾಲ್ಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಗುರುವಾರ ಎಥನಾಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡು, ಬೆಂಕಿ ಅವಘಡ ಸಂಭವಿಸಿದೆ.</p><p>ಸ್ಫೋಟದ ಪರಿಣಾಮ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳಕ್ಕೆ ಹತ್ತಿರ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.</p><p>'ಕಂಚಿನಬಾಗಿಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಟ್ಟಿಯಾಗಿರುವ ಸಾಧ್ಯತೆ ಇದೆ. ಪಲ್ಟಿಯಾದ ತಕ್ಷಣ ಟ್ಯಾಂಕರ್ ಸ್ಪೋಟಿಸಿ ಬೆಂಕಿ ಹತ್ತಿ ಉರಿದಿದೆ. ಘಟನೆಯಲ್ಲಿ ಲಾರಿಯ ಚಾಲಕ ತುಮಕೂರಿನ ಮುರುಗೇಶ ದಾವಣಗೆರೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕ್ರಿಮ್ಸ್ಗೆ ದಾಖಲಿಸಲಾಗಿದೆ.</p><p>ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದರೂ ಒಂದೇ ವಾಹನ ಇರುವ ಕಾರಣ ವೇಗದ ಕಾರ್ಯಚರಣೆ ಫಲಪ್ರದವಾಗಿಲ್ಲ. ಸದ್ಯ ತಾತ್ಕಾಲಿಕವಾಗಿ ರಾಷ್ಟ್ರೀಯ ಹೆದ್ದಾರಿಯ ಅಂಕೋಲಾ ಯಲ್ಲಾಪುರ ಮಾರ್ಗದ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p><p>ಅಂಕೋಲಾ ಪೊಲೀಸ್ ಠಾಣೆ ಎಸ್ಐ ಗುರುನಾಥ ಹಾದಿಮನಿ ಹಾಗೂ ಪೋಲಿಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಕಂದಾಯ ಇಲಾಖೆಯ ಸಿಬ್ಬಂದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.</p>.ಮುಳಬಾಗಿಲು: ನಗರಸಭೆಯಿಂದ ಸ್ವಚ್ಛತಾ ಆಂದೋಲನ; 1050 ಟನ್ ತ್ಯಾಜ್ಯ ವಿಲೇವಾರಿ .ಕೋಲಾರ | ದಿನವಿಡೀ ಬೃಹತ್ ಸ್ವಚ್ಛತಾ ಆಂದೋಲನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ತಾಲ್ಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಗುರುವಾರ ಎಥನಾಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡು, ಬೆಂಕಿ ಅವಘಡ ಸಂಭವಿಸಿದೆ.</p><p>ಸ್ಫೋಟದ ಪರಿಣಾಮ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳಕ್ಕೆ ಹತ್ತಿರ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.</p><p>'ಕಂಚಿನಬಾಗಿಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಟ್ಟಿಯಾಗಿರುವ ಸಾಧ್ಯತೆ ಇದೆ. ಪಲ್ಟಿಯಾದ ತಕ್ಷಣ ಟ್ಯಾಂಕರ್ ಸ್ಪೋಟಿಸಿ ಬೆಂಕಿ ಹತ್ತಿ ಉರಿದಿದೆ. ಘಟನೆಯಲ್ಲಿ ಲಾರಿಯ ಚಾಲಕ ತುಮಕೂರಿನ ಮುರುಗೇಶ ದಾವಣಗೆರೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕ್ರಿಮ್ಸ್ಗೆ ದಾಖಲಿಸಲಾಗಿದೆ.</p><p>ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದರೂ ಒಂದೇ ವಾಹನ ಇರುವ ಕಾರಣ ವೇಗದ ಕಾರ್ಯಚರಣೆ ಫಲಪ್ರದವಾಗಿಲ್ಲ. ಸದ್ಯ ತಾತ್ಕಾಲಿಕವಾಗಿ ರಾಷ್ಟ್ರೀಯ ಹೆದ್ದಾರಿಯ ಅಂಕೋಲಾ ಯಲ್ಲಾಪುರ ಮಾರ್ಗದ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p><p>ಅಂಕೋಲಾ ಪೊಲೀಸ್ ಠಾಣೆ ಎಸ್ಐ ಗುರುನಾಥ ಹಾದಿಮನಿ ಹಾಗೂ ಪೋಲಿಸ್ ಸಿಬ್ಬಂದಿ, ಅಗ್ನಿಶಾಮಕ ದಳ, ಕಂದಾಯ ಇಲಾಖೆಯ ಸಿಬ್ಬಂದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.</p>.ಮುಳಬಾಗಿಲು: ನಗರಸಭೆಯಿಂದ ಸ್ವಚ್ಛತಾ ಆಂದೋಲನ; 1050 ಟನ್ ತ್ಯಾಜ್ಯ ವಿಲೇವಾರಿ .ಕೋಲಾರ | ದಿನವಿಡೀ ಬೃಹತ್ ಸ್ವಚ್ಛತಾ ಆಂದೋಲನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>