<p><strong>ಅಂಕೋಲಾ</strong>: ಕೋರ್ಟ್ನಲ್ಲಿ ಸಾಕ್ಷಿ ಪುರಾವೆಗಳ ಮೂಲಕ ಇತ್ಯರ್ಥಗೊಳ್ಳಬೇಕಾದ ಕೆಲವು ಕ್ಲಿಷ್ಟಕರ ಪ್ರಕರಣ ಹಾಗೂ ಇಲಾಖಾ ಮಟ್ಟದಲ್ಲೇ ಬಗೆಹರಿಸಿಕೊಳ್ಳುವ ಪ್ರಕರಣ ಹೊರತುಪಡಿಸಿ, ಇನ್ನುಳಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರಿಯಾ ಜೋಗಳೇಕರ್ ಸಲಹೆ ನೀಡಿದರು.</p>.<p>ಮಾರ್ಚ್ 14 ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಅಂಗವಾಗಿ ಬುಧವಾರ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಹುತೇಕ ಹಣಕಾಸು ಸಂಸ್ಥೆಗಳ ಪ್ರಕರಣಗಳು ಬಾಕಿ ಇದ್ದು, ಅವುಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ, ಶಿಲ್ಪಾ ನಾಯ್ಕ, ವಕೀಲರ ಸಂಘದ ಅಧ್ಯಕ್ಷೆ ಪ್ರತಿಭಾ ನಾಯ್ಕ, ಕಾರ್ಯದರ್ಶಿ ಮಮತಾ ಕೆರೆಮನೆ, ಪಿಎಸ್ಐ ಗುರುನಾಥ ಹಾದಿಮನೆ, ವಕೀಲರಾದ ಗುರು ನಾಯ್ಕ, ಶಾಂತಾ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಕೋರ್ಟ್ನಲ್ಲಿ ಸಾಕ್ಷಿ ಪುರಾವೆಗಳ ಮೂಲಕ ಇತ್ಯರ್ಥಗೊಳ್ಳಬೇಕಾದ ಕೆಲವು ಕ್ಲಿಷ್ಟಕರ ಪ್ರಕರಣ ಹಾಗೂ ಇಲಾಖಾ ಮಟ್ಟದಲ್ಲೇ ಬಗೆಹರಿಸಿಕೊಳ್ಳುವ ಪ್ರಕರಣ ಹೊರತುಪಡಿಸಿ, ಇನ್ನುಳಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರಿಯಾ ಜೋಗಳೇಕರ್ ಸಲಹೆ ನೀಡಿದರು.</p>.<p>ಮಾರ್ಚ್ 14 ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಅಂಗವಾಗಿ ಬುಧವಾರ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಹುತೇಕ ಹಣಕಾಸು ಸಂಸ್ಥೆಗಳ ಪ್ರಕರಣಗಳು ಬಾಕಿ ಇದ್ದು, ಅವುಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದರು.</p>.<p>ಸಹಾಯಕ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ, ಶಿಲ್ಪಾ ನಾಯ್ಕ, ವಕೀಲರ ಸಂಘದ ಅಧ್ಯಕ್ಷೆ ಪ್ರತಿಭಾ ನಾಯ್ಕ, ಕಾರ್ಯದರ್ಶಿ ಮಮತಾ ಕೆರೆಮನೆ, ಪಿಎಸ್ಐ ಗುರುನಾಥ ಹಾದಿಮನೆ, ವಕೀಲರಾದ ಗುರು ನಾಯ್ಕ, ಶಾಂತಾ ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>