<p><strong>ಅಂಕೋಲಾ:</strong> ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.</p><p>ಬಳ್ಳಾರಿಯಿಂದ ಗೋವಾಕ್ಕೆ ಬರುತ್ತಿದ್ದ ಬಸ್ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.</p><p>'ಓರ್ವ ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಮೃತಪಟ್ಟಿದ್ದಾರೆ. 6 ಜನ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಕಾರವಾರದ ಕ್ರಿಮ್ಸ್ಗೆ ಸಾಗಿಸಲಾಗಿದೆ. 15 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು' ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ. </p><p>ಪಲ್ಟಿಯಾಗಿದ್ದ ಬಸ್ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದರಿಂದ ಕೆಲ ಹೊತ್ತು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಯಲ್ಲಿ ಕಿಲೋಮೀಟರ್ಗಟ್ಟಲೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.</p><p>ಕ್ರೇನ್ ಬಳಸಿ ಬಸ್ನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಿ ಸಂಚಾರ ದಟ್ಟಣೆ ನಿಯಂತ್ರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.</p><p>ಬಳ್ಳಾರಿಯಿಂದ ಗೋವಾಕ್ಕೆ ಬರುತ್ತಿದ್ದ ಬಸ್ ಹೆದ್ದಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.</p><p>'ಓರ್ವ ಪ್ರಯಾಣಿಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಮೃತಪಟ್ಟಿದ್ದಾರೆ. 6 ಜನ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಕಾರವಾರದ ಕ್ರಿಮ್ಸ್ಗೆ ಸಾಗಿಸಲಾಗಿದೆ. 15 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಂಕೋಲಾ ತಾಲ್ಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿ ಒಟ್ಟು 36 ಪ್ರಯಾಣಿಕರಿದ್ದರು' ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ. </p><p>ಪಲ್ಟಿಯಾಗಿದ್ದ ಬಸ್ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದರಿಂದ ಕೆಲ ಹೊತ್ತು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಯಲ್ಲಿ ಕಿಲೋಮೀಟರ್ಗಟ್ಟಲೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.</p><p>ಕ್ರೇನ್ ಬಳಸಿ ಬಸ್ನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಿ ಸಂಚಾರ ದಟ್ಟಣೆ ನಿಯಂತ್ರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>