<p><strong>ಸಿದ್ದಾಪುರ</strong>: ತಾಲ್ಲೂಕಿನ ಬಾಳೇಸರ-ಬಾಳೂರು-ಸಾಗರದ ಸಿದ್ಧಿವಿನಾಯಕ ಸಂಗೀತ ವಿದ್ಯಾಲಯದ 18ನೇ ವಾರ್ಷಿಕೋತ್ಸವ ಈಚೆಗೆ ಬಾಳೇಸರ ಶಾಲಾ ಆವರಣದಲ್ಲಿ ನಡೆಯಿತು.</p>.<p>ಬಾಳೇಸರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಲಾವತಿ ಹೆಗಡೆ ವಾರ್ಷಿಕೋತ್ಸವ ಉದ್ಘಾಟಿಸಿದರು.</p>.<p>ನಾಗಪತಿ ಭಟ್ಟ ಮಿಳಗಾರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಉಮಾಮಹೇಶ್ವರ ಭಟ್ಟ, ರಶ್ಮಿ ವಿನಾಯಕ ಹೆಗಡೆ, ಅಶೋಕ ಹೆಗಡೆ ಶಮೇಮನೆ ಇದ್ದರು. ಸಂಗೀತ ಶಿಕ್ಷಕ ರಾಮಚಂದ್ರ ಹೆಗಡೆ ತಂಗಾರಮನೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಉಮೇಶ ಹೆಗಡೆ ಮಿಳಗಾರ ಕಾರ್ಯಕ್ರಮ ನಿರ್ವಹಿಸಿದರು. ಸಂಗೀತ ಶಾಲೆಯ 38 ವಿದ್ಯಾರ್ಥಿಗಳಿಂದ ಸಂಗೀತ ಕಚೇರಿ ನಡೆಯಿತು. ಸಂಗೀತ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣ ಪತ್ರ ವಿತರಿಸಿದರು.</p>.<p>ನಂತರ ವಿನಾಯಕ ಹೆಗಡೆ ಮುತ್ತಮುರುಡು ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಮಹೇಶ ಹೆಗಡೆ ಹೊಸಗದ್ದೆ, ಹಾರ್ಮೋನಿಯಂನಲ್ಲಿ ಭರತ್ ಹೆಗಡೆ ಹೆಬ್ಬಲಸು, ತಂಬೂರದಲ್ಲಿ ರಶ್ಮಿ ಹೆಗಡೆ ಚಿಟಮಾವು ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ತಾಲ್ಲೂಕಿನ ಬಾಳೇಸರ-ಬಾಳೂರು-ಸಾಗರದ ಸಿದ್ಧಿವಿನಾಯಕ ಸಂಗೀತ ವಿದ್ಯಾಲಯದ 18ನೇ ವಾರ್ಷಿಕೋತ್ಸವ ಈಚೆಗೆ ಬಾಳೇಸರ ಶಾಲಾ ಆವರಣದಲ್ಲಿ ನಡೆಯಿತು.</p>.<p>ಬಾಳೇಸರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಲಾವತಿ ಹೆಗಡೆ ವಾರ್ಷಿಕೋತ್ಸವ ಉದ್ಘಾಟಿಸಿದರು.</p>.<p>ನಾಗಪತಿ ಭಟ್ಟ ಮಿಳಗಾರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಉಮಾಮಹೇಶ್ವರ ಭಟ್ಟ, ರಶ್ಮಿ ವಿನಾಯಕ ಹೆಗಡೆ, ಅಶೋಕ ಹೆಗಡೆ ಶಮೇಮನೆ ಇದ್ದರು. ಸಂಗೀತ ಶಿಕ್ಷಕ ರಾಮಚಂದ್ರ ಹೆಗಡೆ ತಂಗಾರಮನೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಉಮೇಶ ಹೆಗಡೆ ಮಿಳಗಾರ ಕಾರ್ಯಕ್ರಮ ನಿರ್ವಹಿಸಿದರು. ಸಂಗೀತ ಶಾಲೆಯ 38 ವಿದ್ಯಾರ್ಥಿಗಳಿಂದ ಸಂಗೀತ ಕಚೇರಿ ನಡೆಯಿತು. ಸಂಗೀತ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣ ಪತ್ರ ವಿತರಿಸಿದರು.</p>.<p>ನಂತರ ವಿನಾಯಕ ಹೆಗಡೆ ಮುತ್ತಮುರುಡು ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಮಹೇಶ ಹೆಗಡೆ ಹೊಸಗದ್ದೆ, ಹಾರ್ಮೋನಿಯಂನಲ್ಲಿ ಭರತ್ ಹೆಗಡೆ ಹೆಬ್ಬಲಸು, ತಂಬೂರದಲ್ಲಿ ರಶ್ಮಿ ಹೆಗಡೆ ಚಿಟಮಾವು ಸಹಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>