<p><strong>ಜೊಯಿಡಾ</strong>: ಖಾಸಗಿ ಸಂಸ್ಥೆ ಆರೋಗ್ಯ ಬಂಧು ಯೋಜನೆಯಡಿ ತಾಲ್ಲೂಕಿನ ಡಿಗ್ಗಿ ಹಾಗೂ ಕ್ಯಾಸಲ್ ರಾಕ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡುತ್ತಿರುವ ಆರೋಗ್ಯ ಸೇವೆಗಳ ಅವಧಿ ಮೇ31ರಂದು (ನಾಳೆ) ಮುಗಿಯಲಿದ್ದು, ಈ ಭಾಗದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಯೋಜನೆಯನ್ನು ಒಂದು ತಿಂಗಳವರೆಗೆ ( ಜೂನ್ 30 ರವರೆಗೆ) ತಾತ್ಕಾಲಿಕವಾಗಿ ಮುಂದುವರೆಸಲು ಅನುಮೋದನೆ ದೊರೆತಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. </p>.<p>ತಾಲ್ಲೂಕಿನ ಗಡಿಭಾಗವಾದ ಡಿಗ್ಗಿ ಹಾಗೂ ಕ್ಯಾಸಲ್ ರಾಕ್ ಭಾಗದಲ್ಲಿ ವನ್ಯ ಜೀವಿಗಳ ಹಾವಳಿ ಜೊತೆಗೆ ಸಾರಿಗೆ ಸಂಪರ್ಕದ ಕೊರತೆ ಇರುವುದರಿಂದ ಆರೋಗ್ಯ ಬಂಧು ಸೇವೆಯನ್ನು ಮುಂದುವರೆಸುವಂತೆ ಇಲ್ಲಿನ ಸ್ಥಳೀಯರು ಶಾಸಕರಿಗೆ ಮನವಿ ಸಲ್ಲಿಸಿದ್ದರು. </p>.<p>ಜನರು ಆರೋಗ್ಯ ಸೇವೆಗಳ ಪ್ರಯೋಜನ ಪಡೆಯಬೇಕು, ಮುಂದಿನ ದಿನಗಳಲ್ಲಿ ಆರೋಗ್ಯ ಬಂಧು ಯೋಜನೆಯನ್ನು ಕಾಯಂ ಆಗಿ ಸೇವೆ ಸಲ್ಲಿಸುವಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ</strong>: ಖಾಸಗಿ ಸಂಸ್ಥೆ ಆರೋಗ್ಯ ಬಂಧು ಯೋಜನೆಯಡಿ ತಾಲ್ಲೂಕಿನ ಡಿಗ್ಗಿ ಹಾಗೂ ಕ್ಯಾಸಲ್ ರಾಕ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡುತ್ತಿರುವ ಆರೋಗ್ಯ ಸೇವೆಗಳ ಅವಧಿ ಮೇ31ರಂದು (ನಾಳೆ) ಮುಗಿಯಲಿದ್ದು, ಈ ಭಾಗದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಯೋಜನೆಯನ್ನು ಒಂದು ತಿಂಗಳವರೆಗೆ ( ಜೂನ್ 30 ರವರೆಗೆ) ತಾತ್ಕಾಲಿಕವಾಗಿ ಮುಂದುವರೆಸಲು ಅನುಮೋದನೆ ದೊರೆತಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. </p>.<p>ತಾಲ್ಲೂಕಿನ ಗಡಿಭಾಗವಾದ ಡಿಗ್ಗಿ ಹಾಗೂ ಕ್ಯಾಸಲ್ ರಾಕ್ ಭಾಗದಲ್ಲಿ ವನ್ಯ ಜೀವಿಗಳ ಹಾವಳಿ ಜೊತೆಗೆ ಸಾರಿಗೆ ಸಂಪರ್ಕದ ಕೊರತೆ ಇರುವುದರಿಂದ ಆರೋಗ್ಯ ಬಂಧು ಸೇವೆಯನ್ನು ಮುಂದುವರೆಸುವಂತೆ ಇಲ್ಲಿನ ಸ್ಥಳೀಯರು ಶಾಸಕರಿಗೆ ಮನವಿ ಸಲ್ಲಿಸಿದ್ದರು. </p>.<p>ಜನರು ಆರೋಗ್ಯ ಸೇವೆಗಳ ಪ್ರಯೋಜನ ಪಡೆಯಬೇಕು, ಮುಂದಿನ ದಿನಗಳಲ್ಲಿ ಆರೋಗ್ಯ ಬಂಧು ಯೋಜನೆಯನ್ನು ಕಾಯಂ ಆಗಿ ಸೇವೆ ಸಲ್ಲಿಸುವಂತೆ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>