ತಾಲ್ಲೂಕಿನ ವಡಗಟ್ಟಾ ಚೆಕ್ಪೋಸ್ಟ್ನಲ್ಲಿ ಜಿಲ್ಲಾಡಳಿತದ ವತಿಯಿಂದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್., ತಹಶೀಲ್ದಾರ್ ಶಂಕರ ಗೌಡಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಗಾಡೆನ್ ಜಾಂಗತ್ಸೆ ಮೊನ್ಯಾಸ್ಟರಿ ಹಾಗೂ ಡ್ರೆಪುಂಗ್ ಮೊನ್ಯಾಸ್ಟರಿಗಳಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದು, ನ.16ರಂದು ಸಾಯಂಕಾಲ ಹುಬ್ಬಳ್ಳಿ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.
ಕಿರಿಯ ಬಿಕ್ಕು ಲಾಗ್ಯಾಲಾ ರಿನ್ಪೋಚೆ, ಡೊಗುಲಿಂಗ್ ಸೆಟ್ಲಮೆಂಟ್ ಕಚೇರಿಯ ಚೇರಮನ್ ಲಾಖ್ಪಾ ಡೊಲ್ಮಾ, ಗಾಡೆನ್ ಜಾಂಗತ್ಸೆ ಬೌದ್ಧ ಮಂದಿರದ ಹಿರಿಯ ಬಿಕ್ಕುಗಳು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಜಯಕುಮಾರ, ಶಿರಸಿ ಡಿಎಸ್ಪಿ ಗಣೇಶ ಕೆ.ಎಲ್, ಸಿಪಿಐ ಬಿ.ಎಸ್.ಲೋಕಾಪುರ ಇದ್ದರು.