<p>ಕಾರವಾರ: ತಿಂಗಳಿಗೆ ₹ 12 ಸಾವಿರ ಗೌರವಧನ ನೀಡಬೇಕು, ಕೋವಿಡ್ ಸೋಂಕಿನಿಂದ ರಕ್ಷಣೆಗೆ ಪರಿಕರಗಳನ್ನು ನೀಡಬೇಕು ಎಂದು ಒತ್ತಾಯಿಸಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಸ್ಥಗಿತ ಹೋರಾಟ ಮುಂದುವರಿದಿದೆ ಎಂದುರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಚೇತನಾ ಎಂ ಕೊಚರೇಕರ್ ತಿಳಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಜೂನ್ 30ರಿಂದ ವಿವಿಧ ಹಂತಗಳಲ್ಲಿಹೋರಾಟ ನಡೆಸಲಾಗುತ್ತಿದೆ. ಆದರೂ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ. ಹಾಗಾಗಿಜುಲೈ 10ರಿಂದ ಸಂಪೂರ್ಣವಾಗಿ ಕೆಲಸ ಸ್ಥಗಿತಗೊಳಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಈ ಹೋರಾಟ ಆರಂಭವಾಗಿ10 ದಿನಗಳು ಕಳೆದರೂ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಿಲ್ಲ’ ಎಂದು ಬೇಸರ ಬೇಸರಿಸಿದರು.</p>.<p>‘ಆರೋಗ್ಯ ಸಚಿವ ಬಿ.ಶ್ರೀರಾಮುಲು ಆಶಾ ಕಾರ್ಯಕರ್ತೆಯರ ತಿಂಗಳ ಗೌರವಧನವನ್ನು ₹ 10 ಸಾವಿರಕ್ಕೆಹೆಚ್ಚಿಸುವುದಾಗಿ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ, ಮಾತಿನಂತೆ ಅವರು ನಡೆದುಕೊಂಡಿಲ್ಲ.ಇನ್ನೊಂದು ಕಡೆ, ಕಾರ್ಯಕರ್ತೆಯರ ಚಟುವಟಿಕೆಗಳನ್ನು ಆನ್ಲೈನ್ಪೋರ್ಟಲ್ನಲ್ಲಿ ದಾಖಲಿಸಲು ಹಲವು ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸುವ ನೆಪದಲ್ಲಿ ವಿಳಂಬ ನೀತಿಯಿಂದಾಗಿ 2018ಮತ್ತು 2019ರಲ್ಲಿ ಸುಮಾರು 15 ತಿಂಗಳು ಪ್ರತಿ ಕಾರ್ಯಕರ್ತೆಗೆ ಬರಬೇಕಾಗಿದ್ದ ₹ 15 ಸಾವಿರದಿಂದ ₹ 25 ಸಾವಿರದಷ್ಟು ಹಣ ಬರಲೇ ಇಲ್ಲ’ ಎಂದು ದೂರಿದರು.</p>.<p>‘ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶರಾಜ್ಯಗಳಲ್ಲಿ ತಿಂಗಳಿಗೆ ₹10 ಸಾವಿರ ಗೌರವಧನ ನಿಗದಿ ಮಾಡಲಾಗಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಆಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಸಮಿತಿಯ ಕಾರ್ಯದರ್ಶಿ ಶ್ವೇತಾ ಎಲ್ ಕಪಡಸ್ಕರ್ ಹಾಗೂ ಇತರ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ತಿಂಗಳಿಗೆ ₹ 12 ಸಾವಿರ ಗೌರವಧನ ನೀಡಬೇಕು, ಕೋವಿಡ್ ಸೋಂಕಿನಿಂದ ರಕ್ಷಣೆಗೆ ಪರಿಕರಗಳನ್ನು ನೀಡಬೇಕು ಎಂದು ಒತ್ತಾಯಿಸಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಸ್ಥಗಿತ ಹೋರಾಟ ಮುಂದುವರಿದಿದೆ ಎಂದುರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಚೇತನಾ ಎಂ ಕೊಚರೇಕರ್ ತಿಳಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಜೂನ್ 30ರಿಂದ ವಿವಿಧ ಹಂತಗಳಲ್ಲಿಹೋರಾಟ ನಡೆಸಲಾಗುತ್ತಿದೆ. ಆದರೂ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ. ಹಾಗಾಗಿಜುಲೈ 10ರಿಂದ ಸಂಪೂರ್ಣವಾಗಿ ಕೆಲಸ ಸ್ಥಗಿತಗೊಳಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಈ ಹೋರಾಟ ಆರಂಭವಾಗಿ10 ದಿನಗಳು ಕಳೆದರೂ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗಿಲ್ಲ’ ಎಂದು ಬೇಸರ ಬೇಸರಿಸಿದರು.</p>.<p>‘ಆರೋಗ್ಯ ಸಚಿವ ಬಿ.ಶ್ರೀರಾಮುಲು ಆಶಾ ಕಾರ್ಯಕರ್ತೆಯರ ತಿಂಗಳ ಗೌರವಧನವನ್ನು ₹ 10 ಸಾವಿರಕ್ಕೆಹೆಚ್ಚಿಸುವುದಾಗಿ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ, ಮಾತಿನಂತೆ ಅವರು ನಡೆದುಕೊಂಡಿಲ್ಲ.ಇನ್ನೊಂದು ಕಡೆ, ಕಾರ್ಯಕರ್ತೆಯರ ಚಟುವಟಿಕೆಗಳನ್ನು ಆನ್ಲೈನ್ಪೋರ್ಟಲ್ನಲ್ಲಿ ದಾಖಲಿಸಲು ಹಲವು ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸುವ ನೆಪದಲ್ಲಿ ವಿಳಂಬ ನೀತಿಯಿಂದಾಗಿ 2018ಮತ್ತು 2019ರಲ್ಲಿ ಸುಮಾರು 15 ತಿಂಗಳು ಪ್ರತಿ ಕಾರ್ಯಕರ್ತೆಗೆ ಬರಬೇಕಾಗಿದ್ದ ₹ 15 ಸಾವಿರದಿಂದ ₹ 25 ಸಾವಿರದಷ್ಟು ಹಣ ಬರಲೇ ಇಲ್ಲ’ ಎಂದು ದೂರಿದರು.</p>.<p>‘ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶರಾಜ್ಯಗಳಲ್ಲಿ ತಿಂಗಳಿಗೆ ₹10 ಸಾವಿರ ಗೌರವಧನ ನಿಗದಿ ಮಾಡಲಾಗಿದೆ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಆಗಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕು ಸಮಿತಿಯ ಕಾರ್ಯದರ್ಶಿ ಶ್ವೇತಾ ಎಲ್ ಕಪಡಸ್ಕರ್ ಹಾಗೂ ಇತರ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>