ಗುರುವಾರ ಇಲ್ಲಿನ ಹಳಿಯಾಳ ವಕೀಲರ ಸಭಾ ಭವನದಲ್ಲಿ ಮತ ಯಾಚಿಸಿ ಮಾತನಾಡಿದರು. ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಎನ್ಪಿಎಸ್ ಪಿಂಚಣಿ ಯೋಜನೆ ಬದಲಾಗಿ ಒಪಿಎಸ್ ಯೋಜನೆಯನ್ನು ಪುನಃ ಜಾರಿಗೆ ತರುವುದು, ವಕೀಲರ ಸಂಘವನ್ನು ಅಭಿವೃದ್ಧಿ ಪಡಿಸುವುದು, ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಏರ್ಪಡಿಸುವುದು, ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗೆ ಪರಿಹಾರ ಮತ್ತಿತರ ಹಲವಾರು ಅಭಿವೃದ್ಧಿ ಪರ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಎಂದರು.