ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀನಾಥ ಜೋಶಿಗೆ `ಟ್ಯಾಗೋರ್ ಪತ್ರಿಕಾ ಪ್ರಶಸ್ತಿ'

Published : 26 ಜೂನ್ 2018, 17:04 IST
ಫಾಲೋ ಮಾಡಿ
Comments

ಕಾರವಾರ:ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ`ಟ್ಯಾಗೋರ್ ಪತ್ರಿಕಾ ಪ್ರಶಸ್ತಿ'ಗೆ ಪತ್ರಕರ್ತ ಶ್ರೀನಾಥ ಜೋಶಿ ಅವರು ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷ ಟಿ.ಬಿ.ಹರಿಕಾಂತ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಪತ್ರಿಕಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಸಂಘದ ಸದಸ್ಯರಿಗೆ ಪ್ರದಾನ ಮಾಡುವ `ಜೀವಮಾನ ಸಾಧನೆ ಪ್ರಶಸ್ತಿ'ಗೆಪತ್ರಕರ್ತ ವಸಂತಕುಮಾರ್ ಕತಗಾಲ ಹಾಗೂ ಹಿರಿಯ ಛಾಯಾಗ್ರಾಹಕ ಪಾಂಡುರಂಗ ಹರಿಕಂತ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಅವರಿಗೆ ಜುಲೈ ಒಂದರಂದು ಜಿಲ್ಲಾ ಪತ್ರಿಕಾಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT