ಕಳೆದ ಒಂದೆರಡು ತಿಂಗಳುಗಳಿಂದ ರಾಜಕೀಯ ಪಕ್ಷಗಳ ಸಮಾವೇಶ, ಜಾತ್ರೆ, ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆಗಳಿಗೆ ಶುಭಾಶಯ ಕೋರುವ ನೆಪದಲ್ಲಿ ರಾಜಕೀಯ ಮುಖಂಡರ ಬ್ಯಾನರ್ ಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಇದು ಜನರಿಗೆ ಕಿರಿಕಿರಿಯನ್ನೂ ಉಂಟು ಮಾಡಿತ್ತು. ಅವುಗಳನ್ನು ಸಿಬ್ಬಂದಿ ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ಸರ್ಕಾರಿ ಯೋಜನೆಗಳ ಬ್ಯಾನರ್ ಗಳಿಗೆ ಬಣ್ಣ ಬಳಿಯುವ ಕೆಲಸವನ್ನೂ ಮಾಡಲಾಗಿದೆ.