<p><strong>ಅಂಕೋಲಾ:</strong> ತಾಲ್ಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳೆ ಕೆಂದಿಗೆ, ಮಲೆಗದ್ದೆ ಲಕ್ಕಿಗುಳಿ, ಶಿಕಳಿ ತುರ್ಲಿ ಗ್ರಾಮದ ನಿವಾಸಿಗಳು ಗ್ರಾಮದ ರಸ್ತೆ ಅಭಿವೃದ್ಧಿ ಕುರಿತು ಬುಧವಾರ ಅಂಕೋಲಾ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ರಾಘು ನಾಯ್ಕ ಮಾತನಾಡಿ, ‘ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆ ಸಂಪರ್ಕವು ನಮ್ಮ ಗ್ರಾಮಗಳಿಗೆ ಸರಿಯಾಗಿಲ್ಲ. ಗ್ರಾಮಕ್ಕೆ ತೆರಳಲು ಮಣ್ಣಿನ ರಸ್ತೆ ಇದ್ದು, ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವೂ ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ’ ಎಂದರು.</p>.<p>ಬೆತ್ತದ ಹಳ್ಳದಿಂದ ಗ್ರಾಮದ ರಸ್ತೆ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ರಸ್ತೆ ಮಾಡದಿದ್ದಲ್ಲಿ ಗ್ರಾಮದ ನಿವಾಸಿಗಳು ಎಲ್ಲರೂ ಒಟ್ಟಾಗಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ. ಆದ್ದರಿಂದ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು.</p>.<p>ಸಂಜಯ್ ನಾಯ್ಕ, ಮಧು ಗೌಡ, ಸುರೇಂದ್ರ ಗೌಡ, ಸುರೇಖಾ ಗೌಡ, ಸಂತೋಷ್ ಗೌಡ, ಸುರೇಶ ನಾರಾಯಣ, ರಂಜನಾ, ವಿನಯ ಪಾಂಡುರಂಗ, ಪ್ರಮೋದ, ಶಿವಾನಂದ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ತಾಲ್ಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳೆ ಕೆಂದಿಗೆ, ಮಲೆಗದ್ದೆ ಲಕ್ಕಿಗುಳಿ, ಶಿಕಳಿ ತುರ್ಲಿ ಗ್ರಾಮದ ನಿವಾಸಿಗಳು ಗ್ರಾಮದ ರಸ್ತೆ ಅಭಿವೃದ್ಧಿ ಕುರಿತು ಬುಧವಾರ ಅಂಕೋಲಾ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.</p>.<p>ರಾಘು ನಾಯ್ಕ ಮಾತನಾಡಿ, ‘ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆ ಸಂಪರ್ಕವು ನಮ್ಮ ಗ್ರಾಮಗಳಿಗೆ ಸರಿಯಾಗಿಲ್ಲ. ಗ್ರಾಮಕ್ಕೆ ತೆರಳಲು ಮಣ್ಣಿನ ರಸ್ತೆ ಇದ್ದು, ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವೂ ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ’ ಎಂದರು.</p>.<p>ಬೆತ್ತದ ಹಳ್ಳದಿಂದ ಗ್ರಾಮದ ರಸ್ತೆ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ರಸ್ತೆ ಮಾಡದಿದ್ದಲ್ಲಿ ಗ್ರಾಮದ ನಿವಾಸಿಗಳು ಎಲ್ಲರೂ ಒಟ್ಟಾಗಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ. ಆದ್ದರಿಂದ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು.</p>.<p>ಸಂಜಯ್ ನಾಯ್ಕ, ಮಧು ಗೌಡ, ಸುರೇಂದ್ರ ಗೌಡ, ಸುರೇಖಾ ಗೌಡ, ಸಂತೋಷ್ ಗೌಡ, ಸುರೇಶ ನಾರಾಯಣ, ರಂಜನಾ, ವಿನಯ ಪಾಂಡುರಂಗ, ಪ್ರಮೋದ, ಶಿವಾನಂದ, ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>