<p><strong>ಶಿರಸಿ:</strong> ‘ಬೇಡ್ತಿ–ವರದಾ ನದಿ ಜೋಡಣೆ ಸಂಬಂಧ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ತಯಾರಿಕೆಗೆ ತೋರುತ್ತಿರುವ ಉತ್ಸುಕತೆ ನಿಲ್ಲಿಸಿ,ಯೋಜನೆ ಕೈಬಿಡಲು ಸಿ.ಎಂ., ಡಿಸಿಎಂ ಮುಂದಾಗಬೇಕು’ ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಇಲ್ಲಿ ಒತ್ತಾಯಿಸಿದರು.<br><br>‘ರಾಜ್ಯ ಸರ್ಕಾರ ಯೋಜನೆ ಬೇಡ ಎಂದರೆ ಈಗಲೂ ಕೇಂದ್ರ ಸರ್ಕಾರ ಯೋಜನೆ ಹೇರುವುದಿಲ್ಲ. 30 ವರ್ಷದಿಂದ ಚರ್ಚೆ ಆಗದ್ದು, ಈ ಎರಡೂವರೆ ವರ್ಷದಲ್ಲಿ ಏಕೆ ಮುನ್ನೆಲೆಗೆ ಬಂದಿದೆ’ ಎಂದು ಪ್ರಶ್ನಿಸಿದರು.</p>.<p>ಪತ್ರಕರ್ತರ ಜತೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಒಪ್ಪಿದರೆ ಮಾತ್ರ ಯೋಜನೆ ಮುಂದುವರೆಯುತ್ತದೆ. ಇದು ಗೊತ್ತಿದ್ದೂ ಡಿಪಿಆರ್ಗೆ ಅನುಮತಿ ನೀಡಿದ್ದು ಸರಿಯಾದ ಕ್ರಮವಲ್ಲ’ ಎಂದೂ ಆಕ್ಷೇಪಿಸಿದರು. </p>.<p>‘ವೈಜ್ಞಾನಿಕ ಕಾರಣ ಹಾಗೂ ಅನುಭವದ ಆಧಾರದಲ್ಲಿ ನದಿ ಜೋಡಣೆ ಯೋಜನೆ ನಮಗೆ ಬೇಡ. ಬೃಹತ್ ಯೋಜನೆಯಿಂದ ಭೂ ಕುಸಿತ ಉಂಟಾಗುತ್ತಿದೆ. ಜಿಲ್ಲೆಯ ಜನರು ಒಟ್ಟಾಗಿ ಈ ಯೋಜನೆ ಬೇಡ ಎಂದು ವಿರೋಧಿಸುತ್ತಿದ್ದಾರೆ’ ಎಂದು ಅವರು ಉಲ್ಲೇಖಿಸಿದರು.</p>.<p>‘ಜಿಲ್ಲೆಗೆ ಭೇಟಿ ನೀಡಿದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ ಅವರು ಈ ಯೋಜನೆ ಮಾಡುತ್ತೇವೆ ಎಂದು ಹೇಳಿದಾಗ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಏಕೆ ವಿರೋಧ ವ್ಯಕ್ತಪಡಿಸಲಿಲ್ಲ? ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಬೇಡ್ತಿ–ವರದಾ ನದಿ ಜೋಡಣೆ ಸಂಬಂಧ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ತಯಾರಿಕೆಗೆ ತೋರುತ್ತಿರುವ ಉತ್ಸುಕತೆ ನಿಲ್ಲಿಸಿ,ಯೋಜನೆ ಕೈಬಿಡಲು ಸಿ.ಎಂ., ಡಿಸಿಎಂ ಮುಂದಾಗಬೇಕು’ ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಇಲ್ಲಿ ಒತ್ತಾಯಿಸಿದರು.<br><br>‘ರಾಜ್ಯ ಸರ್ಕಾರ ಯೋಜನೆ ಬೇಡ ಎಂದರೆ ಈಗಲೂ ಕೇಂದ್ರ ಸರ್ಕಾರ ಯೋಜನೆ ಹೇರುವುದಿಲ್ಲ. 30 ವರ್ಷದಿಂದ ಚರ್ಚೆ ಆಗದ್ದು, ಈ ಎರಡೂವರೆ ವರ್ಷದಲ್ಲಿ ಏಕೆ ಮುನ್ನೆಲೆಗೆ ಬಂದಿದೆ’ ಎಂದು ಪ್ರಶ್ನಿಸಿದರು.</p>.<p>ಪತ್ರಕರ್ತರ ಜತೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಒಪ್ಪಿದರೆ ಮಾತ್ರ ಯೋಜನೆ ಮುಂದುವರೆಯುತ್ತದೆ. ಇದು ಗೊತ್ತಿದ್ದೂ ಡಿಪಿಆರ್ಗೆ ಅನುಮತಿ ನೀಡಿದ್ದು ಸರಿಯಾದ ಕ್ರಮವಲ್ಲ’ ಎಂದೂ ಆಕ್ಷೇಪಿಸಿದರು. </p>.<p>‘ವೈಜ್ಞಾನಿಕ ಕಾರಣ ಹಾಗೂ ಅನುಭವದ ಆಧಾರದಲ್ಲಿ ನದಿ ಜೋಡಣೆ ಯೋಜನೆ ನಮಗೆ ಬೇಡ. ಬೃಹತ್ ಯೋಜನೆಯಿಂದ ಭೂ ಕುಸಿತ ಉಂಟಾಗುತ್ತಿದೆ. ಜಿಲ್ಲೆಯ ಜನರು ಒಟ್ಟಾಗಿ ಈ ಯೋಜನೆ ಬೇಡ ಎಂದು ವಿರೋಧಿಸುತ್ತಿದ್ದಾರೆ’ ಎಂದು ಅವರು ಉಲ್ಲೇಖಿಸಿದರು.</p>.<p>‘ಜಿಲ್ಲೆಗೆ ಭೇಟಿ ನೀಡಿದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ ಅವರು ಈ ಯೋಜನೆ ಮಾಡುತ್ತೇವೆ ಎಂದು ಹೇಳಿದಾಗ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಏಕೆ ವಿರೋಧ ವ್ಯಕ್ತಪಡಿಸಲಿಲ್ಲ? ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>