<p><strong>ಶಿರಸಿ</strong>: ಬೇಡ್ತಿ ವರದಾ ನದಿ ಜೋಡಣೆ ವಿಷಯ ಅನೇಕ ವರ್ಷಗಳಿಂದಲೂ ಪ್ರಸ್ತಾಪ ಆಗುತ್ತಲೇ ಇದೆ. ಆದರೆ ಇದುವರೆಗೂ ಯಾವುದೇ ಪ್ರಗತಿ ಕಂಡಿಲ್ಲ. ಇಲ್ಲಿಯವರೆಗೂ ಚರ್ಚೆಯಾಗುತ್ತಲೇ ಇದೆ. ಮುಂದೆಯೂ ಚರ್ಚೆಯಲ್ಲೇ ಮುಗಿಯುತ್ತದೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಶನಿವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಡ್ತಿ ವರದಾ ನದಿ ಜೋಡಣೆ ವಿಷಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಸಿಎಂ ಪ್ರಸ್ತಾಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾರ, ಅವರೊಂದಿಗೆ ಯೋಜನೆ ಸಾಧಕಬಾಧಕಗಳ ಬಗ್ಗೆ ಚರ್ಚಿಸುತ್ತೇನೆ. ಈ ವರೆಗೂ ಡಿಪಿ ಆರ್ ಸಿದ್ಧವಾಗಿಲ್ಲ. ಯೋಜನಾ ವರದಿ ಸಿದ್ಧವಾಗಿರುವ ಎಷ್ಟೋ ಯೋಜನೆಗಳು ಜಾರಿಯಾಗದೇ ಇರುವುದು ನಮ್ಮ ಮುಂದೆ ಇದೆ. ಇನ್ನು ಈ ಯೋಜನೆ ಪಶ್ಚಿಮ ಘಟ್ಟದ ಪರಿಸರ ವ್ಯವಸ್ಥೆಗೆ ಮಾರಕವಾಗಲಿದೆ. ಜನರನ್ನು ಕತ್ತಲೆಯಲ್ಲಿಟ್ಟು ಯೋಜನೆ ಸರ್ಕಾರಗಳು ಕಾರ್ಯಗತಗೊಳಿಸುವುದು ಸೂಕ್ತವಲ್ಲ ಎಂದರು. </p>.<p>ಮಳೆ ಮಾಪನ ಯಂತ್ರಗಳ ರಿಪೇರಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ಕೊಟ್ಟಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ. ಮಳೆ ಮಾಪನ ಕೇಂದ್ರ ಸರಿ ಆಗಬೇಕು, ಆದರೆ, ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ. ಕಳೆದ ವರ್ಷ ಈ ಯಂತ್ರಗಳ ಸಮಸ್ಯೆ ಇದ್ದರೂ ಅಂತಿಮವಾಗಿ ಒತ್ತಡಕ್ಕೆ ಮಣಿದು ಪರಿಹಾರ ಬಿಡುಗಡೆಗೊಳಿಸಿದೆ. ಹೀಗಾಗಿ, ಈ ವರ್ಷ ಸಮಸ್ಯೆ ಆಗಲಾರದು ಎಂಬ ಆಶಾಭಾವವಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಬೇಡ್ತಿ ವರದಾ ನದಿ ಜೋಡಣೆ ವಿಷಯ ಅನೇಕ ವರ್ಷಗಳಿಂದಲೂ ಪ್ರಸ್ತಾಪ ಆಗುತ್ತಲೇ ಇದೆ. ಆದರೆ ಇದುವರೆಗೂ ಯಾವುದೇ ಪ್ರಗತಿ ಕಂಡಿಲ್ಲ. ಇಲ್ಲಿಯವರೆಗೂ ಚರ್ಚೆಯಾಗುತ್ತಲೇ ಇದೆ. ಮುಂದೆಯೂ ಚರ್ಚೆಯಲ್ಲೇ ಮುಗಿಯುತ್ತದೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಶನಿವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಡ್ತಿ ವರದಾ ನದಿ ಜೋಡಣೆ ವಿಷಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಸಿಎಂ ಪ್ರಸ್ತಾಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾರ, ಅವರೊಂದಿಗೆ ಯೋಜನೆ ಸಾಧಕಬಾಧಕಗಳ ಬಗ್ಗೆ ಚರ್ಚಿಸುತ್ತೇನೆ. ಈ ವರೆಗೂ ಡಿಪಿ ಆರ್ ಸಿದ್ಧವಾಗಿಲ್ಲ. ಯೋಜನಾ ವರದಿ ಸಿದ್ಧವಾಗಿರುವ ಎಷ್ಟೋ ಯೋಜನೆಗಳು ಜಾರಿಯಾಗದೇ ಇರುವುದು ನಮ್ಮ ಮುಂದೆ ಇದೆ. ಇನ್ನು ಈ ಯೋಜನೆ ಪಶ್ಚಿಮ ಘಟ್ಟದ ಪರಿಸರ ವ್ಯವಸ್ಥೆಗೆ ಮಾರಕವಾಗಲಿದೆ. ಜನರನ್ನು ಕತ್ತಲೆಯಲ್ಲಿಟ್ಟು ಯೋಜನೆ ಸರ್ಕಾರಗಳು ಕಾರ್ಯಗತಗೊಳಿಸುವುದು ಸೂಕ್ತವಲ್ಲ ಎಂದರು. </p>.<p>ಮಳೆ ಮಾಪನ ಯಂತ್ರಗಳ ರಿಪೇರಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ಕೊಟ್ಟಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ. ಮಳೆ ಮಾಪನ ಕೇಂದ್ರ ಸರಿ ಆಗಬೇಕು, ಆದರೆ, ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ. ಕಳೆದ ವರ್ಷ ಈ ಯಂತ್ರಗಳ ಸಮಸ್ಯೆ ಇದ್ದರೂ ಅಂತಿಮವಾಗಿ ಒತ್ತಡಕ್ಕೆ ಮಣಿದು ಪರಿಹಾರ ಬಿಡುಗಡೆಗೊಳಿಸಿದೆ. ಹೀಗಾಗಿ, ಈ ವರ್ಷ ಸಮಸ್ಯೆ ಆಗಲಾರದು ಎಂಬ ಆಶಾಭಾವವಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>