<p><strong>ಶಿರಸಿ</strong>: ‘ಅವೈಜ್ಞಾನಿಕ ಕೊಯ್ಲು ಹಾಗೂ ನಿರ್ವಹಣೆಯಿಂದ ಜೇನು ಸಂತತಿ ನಾಶವಾಗುತ್ತಿದೆ’ ಎಂದು ಸ್ಕೊಡ್ವೆಸ್ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸುಗಾವಿಯಲ್ಲಿ ಬುಧವಾರ ಸ್ಕೊಡ್ವೆಸ್ ಸಂಸ್ಥೆಯು ಎ.ಎನ್.ಝಡ್. ಸಂಸ್ಥೆಯ ಸಹಯೋಗದಲ್ಲಿ ಗೋಲ್ಡನ್ ಹೈವ್ಸ್ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ ಸುಧಾರಿತ ಜೇನು ಕೃಷಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ಪಶ್ಚಿಮ ಘಟ್ಟದ ಜೇನು ತುಪ್ಪದಲ್ಲಿ ಔಷಧೀಯ ಗುಣಗಳು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದ್ದು, ರಾಸಾಯನಿಕ ಸಿಂಪಡಣೆ ಹಾಗೂ ಬೆಂಕಿ ತಗುಲಿಸಿ ಜೇನು ಕೊಯ್ಲು ಮಾಡುವುದರಿಂದ ವ್ಯಾಪಕವಾಗಿ ಜೇನು ಸಂತತಿ ನಾಶವಾದ ಹಿನ್ನೆಲೆಯಲ್ಲಿ ಜೇನಿನ ಉತ್ಪನ್ನವೂ ಸಹ ವ್ಯಾಪಕವಾಗಿ ಕಡಿಮೆಯಾಗಿದೆ. ಜೇನಿನ ಉತ್ಪನ್ನವನ್ನು ಹೆಚ್ಚಿಸುವ ಮೂಲಕ ರೈತ ಮಹಿಳೆಯರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಸುಧಾರಿತ ಜೇನು ಕೃಷಿ ತರಬೇತಿಯನ್ನು ಗೋಲ್ಡನ್ ಹೈವ್ಸ್ ಎಂಬ ಯೋಜನೆಯ ಮುಖಾಂತರ ಜಾರಿಗೆ ತರಲಾಗಿದೆ’ ಎಂದರು. </p>.<p>ತರಬೇತಿಯಲ್ಲಿ ಸುಗಾವಿ, ಬಂಕನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 50ಕ್ಕೂ ಹೆಚ್ಚಿನ ರೈತ ಮಹಿಳೆಯರು, ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು. ಜೇನು ಕೃಷಿ ತಜ್ಞ ಮಧುಕೇಶ್ವರ ಹೆಗಡೆ ಅವರು ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ಜೇನು ಕೃಷಿಯ ಕುರಿತು ತರಬೇತಿ ನೀಡಿದರು. </p>.<p>ಕಾರ್ಯಕ್ರಮದಲ್ಲಿ ಸ್ಕೊಡ್ವೆಸ್ ಸಂಸ್ಥೆಯ ಯೋಜನಾ ಸಮನ್ವಯಾಧಿಕಾರಿ ಪ್ರಶಾಂತ ನಾಯಕ, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು. ಯೋಜನಾ ಸಂಯೋಜಕ ಮಂಜುನಾಥ ಶಿರಸಿಕರ್ ನಿರ್ವಹಿಸಿ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ಅವೈಜ್ಞಾನಿಕ ಕೊಯ್ಲು ಹಾಗೂ ನಿರ್ವಹಣೆಯಿಂದ ಜೇನು ಸಂತತಿ ನಾಶವಾಗುತ್ತಿದೆ’ ಎಂದು ಸ್ಕೊಡ್ವೆಸ್ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಸುಗಾವಿಯಲ್ಲಿ ಬುಧವಾರ ಸ್ಕೊಡ್ವೆಸ್ ಸಂಸ್ಥೆಯು ಎ.ಎನ್.ಝಡ್. ಸಂಸ್ಥೆಯ ಸಹಯೋಗದಲ್ಲಿ ಗೋಲ್ಡನ್ ಹೈವ್ಸ್ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ ಸುಧಾರಿತ ಜೇನು ಕೃಷಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ಪಶ್ಚಿಮ ಘಟ್ಟದ ಜೇನು ತುಪ್ಪದಲ್ಲಿ ಔಷಧೀಯ ಗುಣಗಳು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದ್ದು, ರಾಸಾಯನಿಕ ಸಿಂಪಡಣೆ ಹಾಗೂ ಬೆಂಕಿ ತಗುಲಿಸಿ ಜೇನು ಕೊಯ್ಲು ಮಾಡುವುದರಿಂದ ವ್ಯಾಪಕವಾಗಿ ಜೇನು ಸಂತತಿ ನಾಶವಾದ ಹಿನ್ನೆಲೆಯಲ್ಲಿ ಜೇನಿನ ಉತ್ಪನ್ನವೂ ಸಹ ವ್ಯಾಪಕವಾಗಿ ಕಡಿಮೆಯಾಗಿದೆ. ಜೇನಿನ ಉತ್ಪನ್ನವನ್ನು ಹೆಚ್ಚಿಸುವ ಮೂಲಕ ರೈತ ಮಹಿಳೆಯರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಸುಧಾರಿತ ಜೇನು ಕೃಷಿ ತರಬೇತಿಯನ್ನು ಗೋಲ್ಡನ್ ಹೈವ್ಸ್ ಎಂಬ ಯೋಜನೆಯ ಮುಖಾಂತರ ಜಾರಿಗೆ ತರಲಾಗಿದೆ’ ಎಂದರು. </p>.<p>ತರಬೇತಿಯಲ್ಲಿ ಸುಗಾವಿ, ಬಂಕನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ 50ಕ್ಕೂ ಹೆಚ್ಚಿನ ರೈತ ಮಹಿಳೆಯರು, ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು. ಜೇನು ಕೃಷಿ ತಜ್ಞ ಮಧುಕೇಶ್ವರ ಹೆಗಡೆ ಅವರು ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ಜೇನು ಕೃಷಿಯ ಕುರಿತು ತರಬೇತಿ ನೀಡಿದರು. </p>.<p>ಕಾರ್ಯಕ್ರಮದಲ್ಲಿ ಸ್ಕೊಡ್ವೆಸ್ ಸಂಸ್ಥೆಯ ಯೋಜನಾ ಸಮನ್ವಯಾಧಿಕಾರಿ ಪ್ರಶಾಂತ ನಾಯಕ, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು. ಯೋಜನಾ ಸಂಯೋಜಕ ಮಂಜುನಾಥ ಶಿರಸಿಕರ್ ನಿರ್ವಹಿಸಿ ವಂದಿಸಿದರು. ಸಂಸ್ಥೆಯ ಸಿಬ್ಬಂದಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>