<p>ಭಟ್ಕಳ: ‘ಬೆಳಕೆ ದುರ್ಗಾಪಮೇಶ್ವರಿ ಕ್ಷೇತ್ರವು ಪ್ರವರ್ಧಮಾನಕ್ಕೆ ಬರಲು ಬಿಲ್ಲವ, ಬಲ್ಲವರು, ಮಠ ಹಾಗೂ ಹವ್ಯಕ ಮಹಾಸಭೆಗಳು ವಿಶೇಷ ಕಾರಣಗಳಾಗಿವೆ’ ಎಂದು ಗೋಕರ್ಣದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ಅಖಿಲ ಹವ್ಯಕ ಮಹಾಸಭಾದ ಶ್ರೀಕ್ಷೇತ್ರ ಬೆಳಕೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾದ ಹವ್ಯಕ ಭವನವನ್ನು ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದರು.</p>.<p>‘ಅಖಿಲ ಹವ್ಯಕ ಮಹಾಸಭೆಯ ವತಿಯಿಂದ ಉತ್ತಮ ಸಭಾಭವನ ನಿರ್ಮಾಣ ಮಾಡಿದ್ದು, ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಜೊತೆಗೆ ಎರಡು ಕೊಠಡಿಗಳನ್ನು ನಿರ್ಮಾಣ ಮಾಡಿ ದೂರ ದೂರದಿಂದ ಮಠಕ್ಕೆ ಬರುವ ಭಕ್ತರಿಗೆ ಅರವಟ್ಟಿಗೆ ಮಾಡಿಕೊಡುವ ವಿಚಾರ ಸ್ವಾಗತಾರ್ಹವಾಗಿದೆ’ ಎಂದರು.</p>.<p>‘ಈ ಭಾಗದ ಅಭಿವೃದ್ಧಿಗೆ ಸಚಿವ ಮಂಕಾಳ ವೈದ್ಯರು ದೊಡ್ಡ ಶಕ್ತಿಯಾಗಿದ್ದಾರೆ. ಸಮರ್ಪಣಾ ಭಾವದಿಂದ ಮಠಕ್ಕೆ ಸದಾ ಆಗಮಿಸುವ ಅವರು ಹೇಳಿದ್ದನ್ನು ಮಾಡಿಕೊಟ್ಟಿದ್ದಾರೆ. ಮಠದಿಂದ ಅನೇಕ ಬಾರಿ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದ್ದಾರೆ’ ಎಂದರು.</p>.<p>‘ಅಖಿಲ ಹವ್ಯಕ ಮಹಾಸಭಾ ಗಿರಿಧರ ಕಜೆಯವರ ಅಧ್ಯಕ್ಷತೆಯಲ್ಲಿ ಸರ್ವರ ಮಹಾಸಭೆಯಾಗಿ ಮಾರ್ಪಟ್ಟಿದ್ದು ಇನ್ನೂ ಹೆಚ್ಚಿನ ಕಾರ್ಯ ಮಾಡಲಿ’ ಎಂದೂ ಶ್ರೀಗಳು ಹಾರೈಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಮಾತನಾಡಿ, ‘ಈ ಭಾಗದ ಜನತೆಯ ಉಪಯೋಗಕ್ಕಾಗಿ ಭವ್ಯ ಸಭಾಭವನ ನಿರ್ಮಾಣ ಮಾಡಲಾಗಿದ್ದು, ಒಂದು ಸಾವಿರ ಜನರಿಗೆ ಕುಳಿತುಕೊಳ್ಳವ ವ್ಯವಸ್ಥೆ ಕಲ್ಪಿಸಲಾಗಿದೆ. 8 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೆರಡು ಕೊಠಡಿಗಳನ್ನು ನಿರ್ಮಾಣ ಮಾಡಿ ದೂರದಿಂದ ಮಠಕ್ಕೆ ಬರುವವರಿಗೆ ತಂಗುವುದಕ್ಕೆ ವ್ಯವಸ್ಥೆ ಮಾಡುವ ಇಚ್ಚೆಯಿದೆ’ ಎಂದರು.</p>.<p>ಸಚಿವ ಮಂಕಾಳ ವೈದ್ಯ ಮಾತನಾಡಿ, ‘ಅಖಿಲ ಹವ್ಯಕ ಮಹಾಸಭಾದವರು ಒಂದು ಉತ್ತಮ ಭವನ ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನ ಅಖಿಲ ಹವ್ಯಕ ಮಹಾಸಭಾ ಕರಾವಳಿ ಭಾಗಕ್ಕೆ ತಮ್ಮ ಸೇವೆಯನ್ನು ವಿಸ್ತರಿಸಿರುವುದು ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಮಹಾಸಭಾದ ಅಧ್ಯಕ್ಷರು ದೂರ ಪ್ರಯಾಣಿಕರಿಗೆ ವಿಶ್ರಾಂತಿಗಾಗಿ ಕೊಠಡಿ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಗೆ ಬಂದವರು ಕೇವಲ ವಿಶ್ರಾಂತಿ ಮಾತ್ರವಲ್ಲ, ಊಟ-ಉಪಚಾರವನ್ನೂ ಪಡೆಯುವಂತೆ ವ್ಯವಸ್ಥೆ ಮಾಡುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದರು.</p>.<p>ಪ್ರಮುಖರಾದ ಮೋಹನ ಭಾಸ್ಕರ ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ ಮಾತನಾಡಿದರು. ಮಹಾಸಭಾದ ಆದಿತ್ಯ, ಮಹಾಸಭಾದ ಅಧ್ಯಕ್ಷ ಗಿರಿಧರ ಕಜೆ, ಕಾರ್ಯದರ್ಶಿ ಪ್ರಶಾಂತ ಭಟ್ಟ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-20-246628349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ‘ಬೆಳಕೆ ದುರ್ಗಾಪಮೇಶ್ವರಿ ಕ್ಷೇತ್ರವು ಪ್ರವರ್ಧಮಾನಕ್ಕೆ ಬರಲು ಬಿಲ್ಲವ, ಬಲ್ಲವರು, ಮಠ ಹಾಗೂ ಹವ್ಯಕ ಮಹಾಸಭೆಗಳು ವಿಶೇಷ ಕಾರಣಗಳಾಗಿವೆ’ ಎಂದು ಗೋಕರ್ಣದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.</p>.<p>ಅಖಿಲ ಹವ್ಯಕ ಮಹಾಸಭಾದ ಶ್ರೀಕ್ಷೇತ್ರ ಬೆಳಕೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾದ ಹವ್ಯಕ ಭವನವನ್ನು ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದರು.</p>.<p>‘ಅಖಿಲ ಹವ್ಯಕ ಮಹಾಸಭೆಯ ವತಿಯಿಂದ ಉತ್ತಮ ಸಭಾಭವನ ನಿರ್ಮಾಣ ಮಾಡಿದ್ದು, ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಜೊತೆಗೆ ಎರಡು ಕೊಠಡಿಗಳನ್ನು ನಿರ್ಮಾಣ ಮಾಡಿ ದೂರ ದೂರದಿಂದ ಮಠಕ್ಕೆ ಬರುವ ಭಕ್ತರಿಗೆ ಅರವಟ್ಟಿಗೆ ಮಾಡಿಕೊಡುವ ವಿಚಾರ ಸ್ವಾಗತಾರ್ಹವಾಗಿದೆ’ ಎಂದರು.</p>.<p>‘ಈ ಭಾಗದ ಅಭಿವೃದ್ಧಿಗೆ ಸಚಿವ ಮಂಕಾಳ ವೈದ್ಯರು ದೊಡ್ಡ ಶಕ್ತಿಯಾಗಿದ್ದಾರೆ. ಸಮರ್ಪಣಾ ಭಾವದಿಂದ ಮಠಕ್ಕೆ ಸದಾ ಆಗಮಿಸುವ ಅವರು ಹೇಳಿದ್ದನ್ನು ಮಾಡಿಕೊಟ್ಟಿದ್ದಾರೆ. ಮಠದಿಂದ ಅನೇಕ ಬಾರಿ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದ್ದಾರೆ’ ಎಂದರು.</p>.<p>‘ಅಖಿಲ ಹವ್ಯಕ ಮಹಾಸಭಾ ಗಿರಿಧರ ಕಜೆಯವರ ಅಧ್ಯಕ್ಷತೆಯಲ್ಲಿ ಸರ್ವರ ಮಹಾಸಭೆಯಾಗಿ ಮಾರ್ಪಟ್ಟಿದ್ದು ಇನ್ನೂ ಹೆಚ್ಚಿನ ಕಾರ್ಯ ಮಾಡಲಿ’ ಎಂದೂ ಶ್ರೀಗಳು ಹಾರೈಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಮಾತನಾಡಿ, ‘ಈ ಭಾಗದ ಜನತೆಯ ಉಪಯೋಗಕ್ಕಾಗಿ ಭವ್ಯ ಸಭಾಭವನ ನಿರ್ಮಾಣ ಮಾಡಲಾಗಿದ್ದು, ಒಂದು ಸಾವಿರ ಜನರಿಗೆ ಕುಳಿತುಕೊಳ್ಳವ ವ್ಯವಸ್ಥೆ ಕಲ್ಪಿಸಲಾಗಿದೆ. 8 ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೆರಡು ಕೊಠಡಿಗಳನ್ನು ನಿರ್ಮಾಣ ಮಾಡಿ ದೂರದಿಂದ ಮಠಕ್ಕೆ ಬರುವವರಿಗೆ ತಂಗುವುದಕ್ಕೆ ವ್ಯವಸ್ಥೆ ಮಾಡುವ ಇಚ್ಚೆಯಿದೆ’ ಎಂದರು.</p>.<p>ಸಚಿವ ಮಂಕಾಳ ವೈದ್ಯ ಮಾತನಾಡಿ, ‘ಅಖಿಲ ಹವ್ಯಕ ಮಹಾಸಭಾದವರು ಒಂದು ಉತ್ತಮ ಭವನ ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನ ಅಖಿಲ ಹವ್ಯಕ ಮಹಾಸಭಾ ಕರಾವಳಿ ಭಾಗಕ್ಕೆ ತಮ್ಮ ಸೇವೆಯನ್ನು ವಿಸ್ತರಿಸಿರುವುದು ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಮಹಾಸಭಾದ ಅಧ್ಯಕ್ಷರು ದೂರ ಪ್ರಯಾಣಿಕರಿಗೆ ವಿಶ್ರಾಂತಿಗಾಗಿ ಕೊಠಡಿ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಗೆ ಬಂದವರು ಕೇವಲ ವಿಶ್ರಾಂತಿ ಮಾತ್ರವಲ್ಲ, ಊಟ-ಉಪಚಾರವನ್ನೂ ಪಡೆಯುವಂತೆ ವ್ಯವಸ್ಥೆ ಮಾಡುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದರು.</p>.<p>ಪ್ರಮುಖರಾದ ಮೋಹನ ಭಾಸ್ಕರ ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ ಮಾತನಾಡಿದರು. ಮಹಾಸಭಾದ ಆದಿತ್ಯ, ಮಹಾಸಭಾದ ಅಧ್ಯಕ್ಷ ಗಿರಿಧರ ಕಜೆ, ಕಾರ್ಯದರ್ಶಿ ಪ್ರಶಾಂತ ಭಟ್ಟ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-20-246628349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>