<p>ಭಟ್ಕಳ: ‘ಶಾಂತಿ, ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು’ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಹೇಶ ಜೆ. ಹೇಳಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಈಚೆಗೆ ನಡೆದ ಬಕ್ರೀದ್ ಅಂಗವಾಗಿ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕು ಆಡಳಿತ ನೀಡುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಆಚರಿಸಬೇಕು. ಮೇ.30ರವರೆಗೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ಬಂದ್ ಮಾಡುವುದಲ್ಲದೇ, ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾಳಜಿ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕೃಷ್ಣಮೂರ್ತಿ ಮಾತನಾಡಿ, ‘ಯಾವುದೇ ಅಹಿತಕರ ಘಟನೆ ನಡೆಯದಂತೆ ಹಬ್ಬ ಆಚರಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಗಮನಕ್ಕೆ ತಂದಲ್ಲಿ ಸೂಕ್ತ ಪರಿಹಾರ ಕೈಗೊಳ್ಳಲಾಗುವುದು’ ಎಂದರು.</p>.<p>ತಂಜಿಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡಿ ಬಕ್ರೀದ್ ಆಚರಿಸಲಿದ್ದೇವೆ. ಮಳೆ ಬಂದಲ್ಲಿ ಮಸೀದಿಗಳಲ್ಲೇ ಪ್ರಾರ್ಥನೆ ಮಾಡುತ್ತೇವೆ. ತಾಲ್ಲೂಕಿನಲ್ಲಿ ಪದೇ ಪದೇ ಕರೆಂಟ್ ಹೋಗುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ. ಇದಕ್ಕೆ ಹೆಸ್ಕಾಂ ಇಲಾಖೆ ಗಮನ ಕೊಡಬೇಕು’ ಎಂದು ತಿಳಿಸಿದರು.</p>.<p>ಸಿಪಿಐ ದಿವಾಕರ್ ಎಂ., ಮಾತನಾಡಿ, ‘ ಸುಳ್ಳು, ಪ್ರಚೋದನಕಾರಿ ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಹೆಬಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೈಯದ್ ಅಲಿ, ‘ಹೆಬಳೆ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ಹೊರ ರಾಜ್ಯಗಳಿಂದ ಬಂದ ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲೇ ಮದ್ಯಪಾನ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ದೂರಿದರು.</p>.<p>ಡಿವೈಎಸ್ಪಿ ಮಹೇಶ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ನಗರಸಭೆ ಪೌರಾಯುಕ್ತ ಬಾಬಾಸಾಹೇಬ್ ಮಾನೆ, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಹೆಸ್ಕಾಂ ಎಇಇ ಮಂಜುನಾಥ, ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-20-1715915366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ‘ಶಾಂತಿ, ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು’ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಹೇಶ ಜೆ. ಹೇಳಿದರು.</p>.<p>ತಾಲ್ಲೂಕು ಆಡಳಿತ ಸೌಧದಲ್ಲಿ ಈಚೆಗೆ ನಡೆದ ಬಕ್ರೀದ್ ಅಂಗವಾಗಿ ಶಾಂತಿ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕು ಆಡಳಿತ ನೀಡುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಆಚರಿಸಬೇಕು. ಮೇ.30ರವರೆಗೆ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ಬಂದ್ ಮಾಡುವುದಲ್ಲದೇ, ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾಳಜಿ ವಹಿಸಲಾಗುವುದು’ ಎಂದು ತಿಳಿಸಿದರು.</p>.<p>ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕೃಷ್ಣಮೂರ್ತಿ ಮಾತನಾಡಿ, ‘ಯಾವುದೇ ಅಹಿತಕರ ಘಟನೆ ನಡೆಯದಂತೆ ಹಬ್ಬ ಆಚರಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಗಮನಕ್ಕೆ ತಂದಲ್ಲಿ ಸೂಕ್ತ ಪರಿಹಾರ ಕೈಗೊಳ್ಳಲಾಗುವುದು’ ಎಂದರು.</p>.<p>ತಂಜಿಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡಿ ಬಕ್ರೀದ್ ಆಚರಿಸಲಿದ್ದೇವೆ. ಮಳೆ ಬಂದಲ್ಲಿ ಮಸೀದಿಗಳಲ್ಲೇ ಪ್ರಾರ್ಥನೆ ಮಾಡುತ್ತೇವೆ. ತಾಲ್ಲೂಕಿನಲ್ಲಿ ಪದೇ ಪದೇ ಕರೆಂಟ್ ಹೋಗುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ. ಇದಕ್ಕೆ ಹೆಸ್ಕಾಂ ಇಲಾಖೆ ಗಮನ ಕೊಡಬೇಕು’ ಎಂದು ತಿಳಿಸಿದರು.</p>.<p>ಸಿಪಿಐ ದಿವಾಕರ್ ಎಂ., ಮಾತನಾಡಿ, ‘ ಸುಳ್ಳು, ಪ್ರಚೋದನಕಾರಿ ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಹೆಬಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೈಯದ್ ಅಲಿ, ‘ಹೆಬಳೆ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ಹೊರ ರಾಜ್ಯಗಳಿಂದ ಬಂದ ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲೇ ಮದ್ಯಪಾನ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ದೂರಿದರು.</p>.<p>ಡಿವೈಎಸ್ಪಿ ಮಹೇಶ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ನಗರಸಭೆ ಪೌರಾಯುಕ್ತ ಬಾಬಾಸಾಹೇಬ್ ಮಾನೆ, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಹೆಸ್ಕಾಂ ಎಇಇ ಮಂಜುನಾಥ, ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-20-1715915366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>