<p><strong>ಭಟ್ಕಳ:</strong> ತಾಲ್ಲೂಕಿನ ಸಬ್ಬತ್ತಿ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕದ ಮೇಲೆ ಶನಿವಾರ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿ, ಆಟಕ್ಕೆ ಬಳಿಸಿದ ₹ 3.56 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಬೇಂಗ್ರೆ ಸಾರದಹೊಳೆಯ ನಿವಾಸಿ ಜಗದೀಶ ಮಾಸ್ತಿ ನಾಯ್ಕ (30), ಹಡೀಲ್ ನಿವಾಸಿ ಶಶಿಕಾಂತ ತಂದೆ ನಾಗೇಶ ನಾಯ್ಕ (26), ಸಬ್ಬತ್ತಿಯ ನಾರಾಯಣ ಕುಪ್ಪಯ್ಯ ನಾಯ್ಕ (35) ಬಂಧಿತ ಆರೋಪಿಗಳು.</p>.<p>ದಾಳಿ ವೇಳೆ ಓಡಿ ಹೋದ ತಲಾಂದ ನಿವಾಸಿ ಗಣಪತಿ ವಿಠ್ಠಲ, ಮುಟ್ಟಳ್ಳಿ ನಿವಾಸಿಗಳಾದ ಧನು ಮತ್ತು ಪ್ರದೀಪ, ಶಿರೂರು ನಿವಾಸಿಗಳಾದ ಸಂತೋಷ ಮತ್ತು ಸುಪ್ರೀತ ಹಾಗೂ ಬೈಂದೂರಿನ ನಿವಾಸಿ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>ಗ್ರಾಮೀಣ ಠಾಣಾ ಪಿಎಸ್ಐ ಮಂಜುನಾಥ ಅವರ ನೇತೃತ್ವದಲ್ಲಿ ಠಾಣಾ ಪಿಎಸ್ಐ ಭರಮಪ್ಪ ಬೆಳಗಲಿ, ಎಎಸ್ಐ ರಾಜೇಶ ಕೊರ್ಗ, ಸಿಬ್ಬಂದಿ ನಿಂಗನಗೌಡ ಪಾಟೀಲ, ಮಂಜುನಾಥ ಖಾರ್ವಿ, ಈರಣ್ಣ ಪೂಜಾರಿ, ಅಕ್ಷತ ಅವಜಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ತಾಲ್ಲೂಕಿನ ಸಬ್ಬತ್ತಿ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕದ ಮೇಲೆ ಶನಿವಾರ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿ, ಆಟಕ್ಕೆ ಬಳಿಸಿದ ₹ 3.56 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ.</p>.<p>ತಾಲ್ಲೂಕಿನ ಬೇಂಗ್ರೆ ಸಾರದಹೊಳೆಯ ನಿವಾಸಿ ಜಗದೀಶ ಮಾಸ್ತಿ ನಾಯ್ಕ (30), ಹಡೀಲ್ ನಿವಾಸಿ ಶಶಿಕಾಂತ ತಂದೆ ನಾಗೇಶ ನಾಯ್ಕ (26), ಸಬ್ಬತ್ತಿಯ ನಾರಾಯಣ ಕುಪ್ಪಯ್ಯ ನಾಯ್ಕ (35) ಬಂಧಿತ ಆರೋಪಿಗಳು.</p>.<p>ದಾಳಿ ವೇಳೆ ಓಡಿ ಹೋದ ತಲಾಂದ ನಿವಾಸಿ ಗಣಪತಿ ವಿಠ್ಠಲ, ಮುಟ್ಟಳ್ಳಿ ನಿವಾಸಿಗಳಾದ ಧನು ಮತ್ತು ಪ್ರದೀಪ, ಶಿರೂರು ನಿವಾಸಿಗಳಾದ ಸಂತೋಷ ಮತ್ತು ಸುಪ್ರೀತ ಹಾಗೂ ಬೈಂದೂರಿನ ನಿವಾಸಿ ರಾಜು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>ಗ್ರಾಮೀಣ ಠಾಣಾ ಪಿಎಸ್ಐ ಮಂಜುನಾಥ ಅವರ ನೇತೃತ್ವದಲ್ಲಿ ಠಾಣಾ ಪಿಎಸ್ಐ ಭರಮಪ್ಪ ಬೆಳಗಲಿ, ಎಎಸ್ಐ ರಾಜೇಶ ಕೊರ್ಗ, ಸಿಬ್ಬಂದಿ ನಿಂಗನಗೌಡ ಪಾಟೀಲ, ಮಂಜುನಾಥ ಖಾರ್ವಿ, ಈರಣ್ಣ ಪೂಜಾರಿ, ಅಕ್ಷತ ಅವಜಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>