<p><strong>ಭಟ್ಕಳ:</strong> ಪಟ್ಟಣದ ಹಳೇ ಮೀನು ಮಾರುಕಟ್ಟೆ ಬಳಿ ಕಸ ಎಸೆದು ಮೀನು ಮಾರುಕಟ್ಟೆ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ದ ಕ್ರಮಕ್ಕೆ ಆಗಹ್ರಿಸಿ ಮೀನುಗಾರ ಮಹಿಳೆಯರು ಮಂಗಳವಾರ ಪ್ರತಿಭಟನೆ ನಡೆಸಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಳೆದ ಸೆ.1ರಿಂದ ಸಂತೆ ಮಾರುಕಟ್ಟೆಯಲ್ಲಿರುವ ಹೊಸ ಮೀನು ಮಾರುಕಟ್ಟೆ ಪ್ರಾರಂಭವಾದಾಗಿನಿಂದ ಕೆಲವು ಖಾಸಗಿ ವ್ಯಕ್ತಿಗಳು ಹಳೆ ಬಸ್ ನಿಲ್ದಾಣದಲ್ಲಿನ ಮೀನು ಮಾರುಕಟ್ಟೆ ಬಗ್ಗೆ ಸ್ವಚ್ಛತೆಯ ಹೆಸರಿನಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದರು.</p>.<p>ಹೊಸ ಮೀನು ಮಾರುಕಟ್ಟೆಯ ಹತ್ತಿರ ನಿಂತು ಕೆಲವು ಖಾಸಗಿ ವ್ಯಕ್ತಿಗಳು ಧರ್ಮಾಧಾರಿತವಾಗಿ ಅಪಪ್ರಚಾರ ಹಾಗೂ ಪ್ರಚೋದನೆ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ವಿಷಯವನ್ನು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಸೆ.15ರಂದು ಕೆಲವು ಕಿಡಿಗೇಡಿಗಳು ಹಳೆ ಬಸ್ ನಿಲ್ದಾಣದ ಮೀನು ಮಾರುಕಟ್ಟೆಯ ಸ್ವಚ್ಛತೆಗೆ ಹಾಗೂ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದ ಕಸದ ರಾಶಿಯನ್ನು ಮೀನು ಮಾರುವ ಸ್ಥಳದಲ್ಲಿ ಹಾಕಿದ್ದಾರೆ ಎಂದು ದೂರಿದರು.</p>.<p>ಇಂತಹ ಕಿಡಿಗೇಡಿಗಳ ವಿರುದ್ಧ ಹಾಗೂ ಕಸದ ರಾಶಿಯ ಫೋಟೊ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಪುರಸಭೆ ಮುಖ್ಯಾಧಿಕಾರಿಗಳು, ಪೊಲೀಸ್ ಇಲಾಖೆಗೆ ಕೂಡಲೇ ದೂರು ನೀಡಿ ಪ್ರಕರಣ ದಾಖಲಿಸುವಂತೆ ಮನವಿಯಲ್ಲಿ ಆಗ್ರಹಿಸಿದರು.</p>.<p>ಪ್ರಮುಖರಾದ ಶ್ರೀಕಾಂತ ನಾಯ್ಕ ಆಸರಕೇರಿ, ಜಯಂತ ಬೆಣಂದೂರು ಖಾಜಾ, ಮೀನುಗಾರ ಮಹಿಳೆಯಾದ ಕಲ್ಯಾಣಿ, ಪಾರ್ವತಿ, ರೇಣುಕಾ, ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಪಟ್ಟಣದ ಹಳೇ ಮೀನು ಮಾರುಕಟ್ಟೆ ಬಳಿ ಕಸ ಎಸೆದು ಮೀನು ಮಾರುಕಟ್ಟೆ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ದ ಕ್ರಮಕ್ಕೆ ಆಗಹ್ರಿಸಿ ಮೀನುಗಾರ ಮಹಿಳೆಯರು ಮಂಗಳವಾರ ಪ್ರತಿಭಟನೆ ನಡೆಸಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಳೆದ ಸೆ.1ರಿಂದ ಸಂತೆ ಮಾರುಕಟ್ಟೆಯಲ್ಲಿರುವ ಹೊಸ ಮೀನು ಮಾರುಕಟ್ಟೆ ಪ್ರಾರಂಭವಾದಾಗಿನಿಂದ ಕೆಲವು ಖಾಸಗಿ ವ್ಯಕ್ತಿಗಳು ಹಳೆ ಬಸ್ ನಿಲ್ದಾಣದಲ್ಲಿನ ಮೀನು ಮಾರುಕಟ್ಟೆ ಬಗ್ಗೆ ಸ್ವಚ್ಛತೆಯ ಹೆಸರಿನಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದರು.</p>.<p>ಹೊಸ ಮೀನು ಮಾರುಕಟ್ಟೆಯ ಹತ್ತಿರ ನಿಂತು ಕೆಲವು ಖಾಸಗಿ ವ್ಯಕ್ತಿಗಳು ಧರ್ಮಾಧಾರಿತವಾಗಿ ಅಪಪ್ರಚಾರ ಹಾಗೂ ಪ್ರಚೋದನೆ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ವಿಷಯವನ್ನು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಸೆ.15ರಂದು ಕೆಲವು ಕಿಡಿಗೇಡಿಗಳು ಹಳೆ ಬಸ್ ನಿಲ್ದಾಣದ ಮೀನು ಮಾರುಕಟ್ಟೆಯ ಸ್ವಚ್ಛತೆಗೆ ಹಾಗೂ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದ ಕಸದ ರಾಶಿಯನ್ನು ಮೀನು ಮಾರುವ ಸ್ಥಳದಲ್ಲಿ ಹಾಕಿದ್ದಾರೆ ಎಂದು ದೂರಿದರು.</p>.<p>ಇಂತಹ ಕಿಡಿಗೇಡಿಗಳ ವಿರುದ್ಧ ಹಾಗೂ ಕಸದ ರಾಶಿಯ ಫೋಟೊ, ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಪುರಸಭೆ ಮುಖ್ಯಾಧಿಕಾರಿಗಳು, ಪೊಲೀಸ್ ಇಲಾಖೆಗೆ ಕೂಡಲೇ ದೂರು ನೀಡಿ ಪ್ರಕರಣ ದಾಖಲಿಸುವಂತೆ ಮನವಿಯಲ್ಲಿ ಆಗ್ರಹಿಸಿದರು.</p>.<p>ಪ್ರಮುಖರಾದ ಶ್ರೀಕಾಂತ ನಾಯ್ಕ ಆಸರಕೇರಿ, ಜಯಂತ ಬೆಣಂದೂರು ಖಾಜಾ, ಮೀನುಗಾರ ಮಹಿಳೆಯಾದ ಕಲ್ಯಾಣಿ, ಪಾರ್ವತಿ, ರೇಣುಕಾ, ರಾಮಚಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>