<p><strong>ಭಟ್ಕಳ:</strong> ‘ಭಕ್ತಿಯಿಂದಷ್ಟೇ ಸಂತುಷ್ಟನಾಗುವ ಹನುಮಂತ ದೇವರು ಬೇಡಿದ್ದನ್ನು ನೀಡುತ್ತಾನೆ’ ಎಂದು ಚಿತ್ರಾಪುರ ಸಂಸ್ಥಾನದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಹೇಳಿದರು.</p>.<p>ಮಣ್ಕುಳಿಯ ಹನುಮಂತ ಹಾಗೂ ಲಕ್ಷ್ಮೀನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಆಶೀರ್ವಚನ ನೀಡಿದರು.</p>.<p>‘ಭಗವಂತನ ಧ್ಯಾನವನ್ನು ಪ್ರತಿ ದಿನ ಮಾಡುವುದರಿಂದ, ಭಗವಂತನಲ್ಲಿ ಲೀನವಾಗಿ ಬೇಡಿಕೊಳ್ಳುವುದರ ಮೂಲಕ ಅಂತಃಕರಣದಲ್ಲಿ ಪರಿವರ್ತನೆಯಾದಾಗ ಮಾತ್ರ ದೇವರ ಆಶೀರ್ವಾದ ದೊರೆಯುತ್ತದೆ’ ಎಂದರು.</p>.<p>ಕುಮಟಾ ಶಾಸಕ ದಿನಕರ ಶೆಟ್ಟಿ, ‘ದೇವಸ್ಥಾನದ ನಿರ್ಮಾಣದಲ್ಲಿ ಸ್ಥಳೀಯರ ಹಾಗೂ ಇತರೇ ಸಮಾಜದವರ ಸಹಕಾರ ಸ್ಮರಣೀಯವಾಗಿದೆ. ಸಮಾಜದವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ’ ಎಂದು ತಿಳಿಸಿದರು.</p>.<p>ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಭಾಷ ಎಂ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ದಿಲೀಪ ಶೆಟ್ಟಿ, ಸುರೇಶ ಶೆಟ್ಟಿ ಮಾತನಾಡಿದರು. ಆರತಿ ಸದಾನಂದ ಶೆಟ್ಟಿ, ತಾರಾ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ‘ಭಕ್ತಿಯಿಂದಷ್ಟೇ ಸಂತುಷ್ಟನಾಗುವ ಹನುಮಂತ ದೇವರು ಬೇಡಿದ್ದನ್ನು ನೀಡುತ್ತಾನೆ’ ಎಂದು ಚಿತ್ರಾಪುರ ಸಂಸ್ಥಾನದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಹೇಳಿದರು.</p>.<p>ಮಣ್ಕುಳಿಯ ಹನುಮಂತ ಹಾಗೂ ಲಕ್ಷ್ಮೀನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಆಶೀರ್ವಚನ ನೀಡಿದರು.</p>.<p>‘ಭಗವಂತನ ಧ್ಯಾನವನ್ನು ಪ್ರತಿ ದಿನ ಮಾಡುವುದರಿಂದ, ಭಗವಂತನಲ್ಲಿ ಲೀನವಾಗಿ ಬೇಡಿಕೊಳ್ಳುವುದರ ಮೂಲಕ ಅಂತಃಕರಣದಲ್ಲಿ ಪರಿವರ್ತನೆಯಾದಾಗ ಮಾತ್ರ ದೇವರ ಆಶೀರ್ವಾದ ದೊರೆಯುತ್ತದೆ’ ಎಂದರು.</p>.<p>ಕುಮಟಾ ಶಾಸಕ ದಿನಕರ ಶೆಟ್ಟಿ, ‘ದೇವಸ್ಥಾನದ ನಿರ್ಮಾಣದಲ್ಲಿ ಸ್ಥಳೀಯರ ಹಾಗೂ ಇತರೇ ಸಮಾಜದವರ ಸಹಕಾರ ಸ್ಮರಣೀಯವಾಗಿದೆ. ಸಮಾಜದವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದೆ’ ಎಂದು ತಿಳಿಸಿದರು.</p>.<p>ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಭಾಷ ಎಂ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ದಿಲೀಪ ಶೆಟ್ಟಿ, ಸುರೇಶ ಶೆಟ್ಟಿ ಮಾತನಾಡಿದರು. ಆರತಿ ಸದಾನಂದ ಶೆಟ್ಟಿ, ತಾರಾ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>