<p><strong>ಭಟ್ಕಳ:</strong> ತಾಲ್ಲೂಕಿನ ಜಾಲಿ ದೇವಿನಗರದ ಪದ್ಮಾ ಮಾದೇವ ನಾಯ್ಕ ಎಂಬುವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಹಣ ಕಳ್ಳತನವಾದ ಘಟನೆ ನಡೆದಿದೆ.</p><p>‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ 86 ಗ್ರಾಂ ಬಂಗಾರದ ಆಭರಣ, 14 ಗ್ರಾಂ ಬೆಳ್ಳಿ ಆಭರಣ ಹಾಗೂ ₹10 ಸಾವಿರ ನಗದು ಸೇರಿ ಅಂದಾಜು ₹8.80 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.</p><p>ಪ್ರಕರಣ ದಾಖಲಾದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದರು.</p><p><strong>ಯುವಕ ಆತ್ಮಹತ್ಯೆ:</strong> ತಾಲ್ಲೂಕಿನ ಮೂಡಭಟ್ಕಳಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಮುಂಡಳ್ಳಿ ನಿವಾಸಿ ಲೋಕೇಶ್ ಮಾಯಪ್ಪ ತೇವರ (34) ಮೃತ.</p><p>‘ಮದ್ಯ ವ್ಯಸನದಿಂದ ಲೋಕೇಶ್ ಗೂಡಂಗಡಿ ಶೆಡ್ಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ತಾಲ್ಲೂಕಿನ ಜಾಲಿ ದೇವಿನಗರದ ಪದ್ಮಾ ಮಾದೇವ ನಾಯ್ಕ ಎಂಬುವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಹಣ ಕಳ್ಳತನವಾದ ಘಟನೆ ನಡೆದಿದೆ.</p><p>‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ 86 ಗ್ರಾಂ ಬಂಗಾರದ ಆಭರಣ, 14 ಗ್ರಾಂ ಬೆಳ್ಳಿ ಆಭರಣ ಹಾಗೂ ₹10 ಸಾವಿರ ನಗದು ಸೇರಿ ಅಂದಾಜು ₹8.80 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.</p><p>ಪ್ರಕರಣ ದಾಖಲಾದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದರು.</p><p><strong>ಯುವಕ ಆತ್ಮಹತ್ಯೆ:</strong> ತಾಲ್ಲೂಕಿನ ಮೂಡಭಟ್ಕಳಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಮುಂಡಳ್ಳಿ ನಿವಾಸಿ ಲೋಕೇಶ್ ಮಾಯಪ್ಪ ತೇವರ (34) ಮೃತ.</p><p>‘ಮದ್ಯ ವ್ಯಸನದಿಂದ ಲೋಕೇಶ್ ಗೂಡಂಗಡಿ ಶೆಡ್ಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>