<p><strong>ಭಟ್ಕಳ:</strong> ಪಟ್ಟಣದ ಸರ್ಕಾರಿ ಆಸ್ಪತ್ರೆಯ ರಸ್ತೆಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯದ ತ್ಯಾಜ್ಯ ನೀರು ಕಳೆದ ಒಂದು ವಾರದಿಂದ ರಸ್ತೆ ಮೇಲೆ ಹರಿಯುತ್ತಿದೆ. ಪುರಸಭೆ ಕ್ರಮ ವಹಿಸದೇ ನಿರ್ಲಕ್ಷ್ಯ ತೋರುತ್ತಿದೆ ಎಂಬುದು ಸಾರ್ವಜನಿಕರ ಆರೋಪ.</p>.<p>ಈ ಮಾರ್ಗದಲ್ಲಿ ತಾಲ್ಲೂಕು ಆಸ್ಪತ್ರೆ, ಆನಂದ ಆಶ್ರಮ ಶಾಲೆ, ಹಿಂದೂ ವರ್ಗಗಳ ವಸತಿ ನಿಲಯ ಇವೆ.</p>.<p>‘ತಾಲ್ಲೂಕು ಆಸ್ಪತ್ರೆಯ ರಸ್ತೆಯಲ್ಲಿ ನಿರ್ಮಾಣವಾದ ಹೊಸ ಅಲ್ಪಸಂಖ್ಯಾತ ವಸತಿ ನಿಲಯ ಕಟ್ಟಡಕ್ಕೆ ಒಳಚರಂಡಿ ಸಂಪರ್ಕ ನೀಡುವಂತೆ 2022ರಿಂದ ಪುರಸಭೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಈ ರಸ್ತೆಯಲ್ಲಿ ವಸತಿ ನಿಲಯದ ವರೆಗೆ ಯುಜಿಡಿ ಸಂಪರ್ಕವಿರದ ಕಾರಣ ಈ ಸಮಸ್ಯೆ ಎದುರಾಗಿದೆ’ ಎಂಬುದು ಅಧಿಕಾರಿಯೊಬ್ಬರು ಹೇಳಿದರು.</p>.<p>‘ವಸತಿ ನಿಲಯದ ದುಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಪುರಸಭೆಗೆ ಸೂಚಿಸಿದ್ದರೂ ಪುರಸಭೆ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲ್ಲೂಕಾಧಿಕಾರಿ ಶಂಸುದ್ದೀನ್ ಪ್ರತಿಕ್ರಿಯಿಸಿದರು.</p>.<p>‘ಪುರಸಭೆಯಿಂದ ಪರ್ಯಾಯ ಯುಜಿಡಿ ಸಂಪರ್ಕ ಪಡೆದುಕೊಳ್ಳುವ ಕುರಿತು ಮಾಹಿತಿ ನೀಡಲಾಗಿದ್ದು, ಅನುದಾನ ಕೊರತೆಯಿಂದ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತಿಲ್ಲ’ ಎಂದು ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ ನಾವಡ ತಿಳಿಸಿದರು.</p>.<p>ಸ್ಥಳಕ್ಕೆ ಗುರುವಾರ ಉಪವಿಭಾಗಾಧಿಕಾರಿ ಕೆ.ಕಾವ್ಯರಾಣಿ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಆದರೆ, ಸಮಸ್ಯೆ ಪರಿಹಾರಕ್ಕೆ ಕ್ರಮವಾಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಪಟ್ಟಣದ ಸರ್ಕಾರಿ ಆಸ್ಪತ್ರೆಯ ರಸ್ತೆಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯದ ತ್ಯಾಜ್ಯ ನೀರು ಕಳೆದ ಒಂದು ವಾರದಿಂದ ರಸ್ತೆ ಮೇಲೆ ಹರಿಯುತ್ತಿದೆ. ಪುರಸಭೆ ಕ್ರಮ ವಹಿಸದೇ ನಿರ್ಲಕ್ಷ್ಯ ತೋರುತ್ತಿದೆ ಎಂಬುದು ಸಾರ್ವಜನಿಕರ ಆರೋಪ.</p>.<p>ಈ ಮಾರ್ಗದಲ್ಲಿ ತಾಲ್ಲೂಕು ಆಸ್ಪತ್ರೆ, ಆನಂದ ಆಶ್ರಮ ಶಾಲೆ, ಹಿಂದೂ ವರ್ಗಗಳ ವಸತಿ ನಿಲಯ ಇವೆ.</p>.<p>‘ತಾಲ್ಲೂಕು ಆಸ್ಪತ್ರೆಯ ರಸ್ತೆಯಲ್ಲಿ ನಿರ್ಮಾಣವಾದ ಹೊಸ ಅಲ್ಪಸಂಖ್ಯಾತ ವಸತಿ ನಿಲಯ ಕಟ್ಟಡಕ್ಕೆ ಒಳಚರಂಡಿ ಸಂಪರ್ಕ ನೀಡುವಂತೆ 2022ರಿಂದ ಪುರಸಭೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಈ ರಸ್ತೆಯಲ್ಲಿ ವಸತಿ ನಿಲಯದ ವರೆಗೆ ಯುಜಿಡಿ ಸಂಪರ್ಕವಿರದ ಕಾರಣ ಈ ಸಮಸ್ಯೆ ಎದುರಾಗಿದೆ’ ಎಂಬುದು ಅಧಿಕಾರಿಯೊಬ್ಬರು ಹೇಳಿದರು.</p>.<p>‘ವಸತಿ ನಿಲಯದ ದುಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಪುರಸಭೆಗೆ ಸೂಚಿಸಿದ್ದರೂ ಪುರಸಭೆ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ತಾಲ್ಲೂಕಾಧಿಕಾರಿ ಶಂಸುದ್ದೀನ್ ಪ್ರತಿಕ್ರಿಯಿಸಿದರು.</p>.<p>‘ಪುರಸಭೆಯಿಂದ ಪರ್ಯಾಯ ಯುಜಿಡಿ ಸಂಪರ್ಕ ಪಡೆದುಕೊಳ್ಳುವ ಕುರಿತು ಮಾಹಿತಿ ನೀಡಲಾಗಿದ್ದು, ಅನುದಾನ ಕೊರತೆಯಿಂದ ಸಂಪರ್ಕ ಕಲ್ಪಿಸಲು ಸಾಧ್ಯವಾಗುತ್ತಿಲ್ಲ’ ಎಂದು ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ ನಾವಡ ತಿಳಿಸಿದರು.</p>.<p>ಸ್ಥಳಕ್ಕೆ ಗುರುವಾರ ಉಪವಿಭಾಗಾಧಿಕಾರಿ ಕೆ.ಕಾವ್ಯರಾಣಿ, ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಆದರೆ, ಸಮಸ್ಯೆ ಪರಿಹಾರಕ್ಕೆ ಕ್ರಮವಾಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>