<p>ಭಟ್ಕಳ: ತಾಲ್ಲೂಕಿನ ಕೋಣಾರದ ವಸತಿ ಪ್ರದೇಶದಲ್ಲಿನ ಸಿಸಿಟಿವಿಯಲ್ಲಿ ಎರಡು ಚಿರತೆಗಳು ಓಡಾಡಿದ ದ್ಯಶ್ಯ ಶನಿವಾರ ಸೆರೆಯಾಗಿದ್ದು ಜನತೆ ತೀವ್ರ ಆತಂಕಕ್ಕೆ ಈಡಾಗಿದ್ದಾರೆ.</p>.<p>ಶನಿವಾರ ರಾತ್ರಿ 11ಗಂಟೆ ಸುಮಾರಿಗೆ ಕೋಣಾರದ ಮಂಜುನಾಥ ಹೆಬ್ಬಾರ್ ಅವರ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯದಲ್ಲಿ 2 ರಿಂದ 3 ವರ್ಷ ವಯಸ್ಸಿನ ಎರಡು ಚಿರತೆಗಳು ನಡೆದುಕೊಂಡು ಬರುತ್ತಿರುವ ನೋಟ ದಾಖಲಾಗಿದೆ. ಇದನ್ನು ಕಂಡ ಮನೆಯವರು ಗಾಬರಿಯಾಗಿದ್ದು ಸುದ್ದಿ ತಿಳಿಯುತ್ತಲೇ ಗ್ರಾಮಸ್ಥರು ಜಾಗೃತರಾಗಿದ್ದಾರೆ.</p>.<p>ತಮ್ಮ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಂಜೆಯ ನಂತರ ಓಡಾಡುವುದಕ್ಕೂ ಹೆದರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.</p>.<p>’ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆಯ ಓಡಾಟವನ್ನು ಇಲಾಖೆಯೂ ಕೂಡಾ ಗಮನಿಸಿದೆ. ಸಿಬ್ಬಂದಿ ರಾತ್ರಿ ಗಸ್ತು ಹೋಗುವ ಸಮಯದಲ್ಲಿ ಚಿರತೆಗಳು ಆ ಭಾಗದಲ್ಲಿ ಕಾಣಿಸಿಕೊಂಡಿದ್ದು ಇದು ಆಹಾರ ಅರಸಿ ಬರುತ್ತಿವೆ ಎಂದು ಹೇಳಿದ್ದಾರೆ. ಜನವಸತಿ ಪ್ರದೇಶಕ್ಕೆ ಬಂದರೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಕೊಟ್ಟರೆ ಅವುಗಳನ್ನು ಅಲ್ಲಿಂದ ಸ್ಥಳಾಂತರಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದು ವಲಯ ಅರಣ್ಯಾಧಿಕಾರಿ ವಿಶ್ವನಾಥ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-1475667718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ತಾಲ್ಲೂಕಿನ ಕೋಣಾರದ ವಸತಿ ಪ್ರದೇಶದಲ್ಲಿನ ಸಿಸಿಟಿವಿಯಲ್ಲಿ ಎರಡು ಚಿರತೆಗಳು ಓಡಾಡಿದ ದ್ಯಶ್ಯ ಶನಿವಾರ ಸೆರೆಯಾಗಿದ್ದು ಜನತೆ ತೀವ್ರ ಆತಂಕಕ್ಕೆ ಈಡಾಗಿದ್ದಾರೆ.</p>.<p>ಶನಿವಾರ ರಾತ್ರಿ 11ಗಂಟೆ ಸುಮಾರಿಗೆ ಕೋಣಾರದ ಮಂಜುನಾಥ ಹೆಬ್ಬಾರ್ ಅವರ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯದಲ್ಲಿ 2 ರಿಂದ 3 ವರ್ಷ ವಯಸ್ಸಿನ ಎರಡು ಚಿರತೆಗಳು ನಡೆದುಕೊಂಡು ಬರುತ್ತಿರುವ ನೋಟ ದಾಖಲಾಗಿದೆ. ಇದನ್ನು ಕಂಡ ಮನೆಯವರು ಗಾಬರಿಯಾಗಿದ್ದು ಸುದ್ದಿ ತಿಳಿಯುತ್ತಲೇ ಗ್ರಾಮಸ್ಥರು ಜಾಗೃತರಾಗಿದ್ದಾರೆ.</p>.<p>ತಮ್ಮ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಂಜೆಯ ನಂತರ ಓಡಾಡುವುದಕ್ಕೂ ಹೆದರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.</p>.<p>’ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆಯ ಓಡಾಟವನ್ನು ಇಲಾಖೆಯೂ ಕೂಡಾ ಗಮನಿಸಿದೆ. ಸಿಬ್ಬಂದಿ ರಾತ್ರಿ ಗಸ್ತು ಹೋಗುವ ಸಮಯದಲ್ಲಿ ಚಿರತೆಗಳು ಆ ಭಾಗದಲ್ಲಿ ಕಾಣಿಸಿಕೊಂಡಿದ್ದು ಇದು ಆಹಾರ ಅರಸಿ ಬರುತ್ತಿವೆ ಎಂದು ಹೇಳಿದ್ದಾರೆ. ಜನವಸತಿ ಪ್ರದೇಶಕ್ಕೆ ಬಂದರೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಕೊಟ್ಟರೆ ಅವುಗಳನ್ನು ಅಲ್ಲಿಂದ ಸ್ಥಳಾಂತರಿಸಲು ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದು ವಲಯ ಅರಣ್ಯಾಧಿಕಾರಿ ವಿಶ್ವನಾಥ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-20-1475667718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>