<p><strong>ಭಟ್ಕಳ</strong>: ತಾಲ್ಲೂಕಿನ ಶಿರಾಲಿನ ಕಳಿನಕಟ್ಟೆ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಡೆಯಾದ ಶಿರಾಲಿಯ ಪಡುಶಿರಾಲಿ ನಿವಾಸಿ ಮಾದೇವ ಜಟ್ಟಪ್ಪ ನಾಯ್ಕ (52) ಮೃತದೇಹ ಸೋಮವಾರ ಬೆಳಿಗ್ಗೆ ಮುಳುಗಿದ ಸ್ಥಳದಲ್ಲಿಯ ಅನತಿ ದೂರದಲ್ಲಿ ಪತ್ತೆಯಾಗಿದೆ.</p>.<p>ಪತ್ತೆಯಾದ ಮೃತದೇಹವನ್ನು ಶವಪರೀಕ್ಷೆ ಬಳಿಕ ಅಂತ್ಯಕ್ರಿಯೆಗಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಎಲ್ಲ 8 ಮೃತದೇಹಗಳ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಿಗ್ಗೆ ಅವರವರ ಕುಟುಂಬಕ್ಕೆ ಸೇರಿದ ಜಮೀನುಗಳಲ್ಲಿ ನಡೆಸಲಾಗಿದೆ. ಸೋಮವಾರ ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೃತರ ಕುಟಂಬಗಳಿಗೆ ತೆರಳಿ ಸಾಂತ್ವಾನ ಹೇಳಿದರು.</p>.<p>ಜಿಲ್ಲಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸೋಮವಾರ ಸಂತ್ರಸ್ತರ ಮನೆಗೆ ತೆರಳಿ ಸಾಂತ್ವಾನ ಹೇಳಿ ಮೃತಪಟ್ಟ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ತಿಳಿಸಿದರು. ಸರ್ಕಾರದಿಂದ ಪರಿಹಾರ ಮಾತ್ರವಲ್ಲದೆ ಮೀನುಗಾರಿಕೆ ಇಲಾಖೆಯಿಂದಲೂ ಸಾಧ್ಯವಾದರೆ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-20-389775501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ತಾಲ್ಲೂಕಿನ ಶಿರಾಲಿನ ಕಳಿನಕಟ್ಟೆ ನದಿಯಲ್ಲಿ ಚಿಪ್ಪೆಕಲ್ಲು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಡೆಯಾದ ಶಿರಾಲಿಯ ಪಡುಶಿರಾಲಿ ನಿವಾಸಿ ಮಾದೇವ ಜಟ್ಟಪ್ಪ ನಾಯ್ಕ (52) ಮೃತದೇಹ ಸೋಮವಾರ ಬೆಳಿಗ್ಗೆ ಮುಳುಗಿದ ಸ್ಥಳದಲ್ಲಿಯ ಅನತಿ ದೂರದಲ್ಲಿ ಪತ್ತೆಯಾಗಿದೆ.</p>.<p>ಪತ್ತೆಯಾದ ಮೃತದೇಹವನ್ನು ಶವಪರೀಕ್ಷೆ ಬಳಿಕ ಅಂತ್ಯಕ್ರಿಯೆಗಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಎಲ್ಲ 8 ಮೃತದೇಹಗಳ ಅಂತ್ಯಕ್ರಿಯೆಯನ್ನು ಸೋಮವಾರ ಬೆಳಿಗ್ಗೆ ಅವರವರ ಕುಟುಂಬಕ್ಕೆ ಸೇರಿದ ಜಮೀನುಗಳಲ್ಲಿ ನಡೆಸಲಾಗಿದೆ. ಸೋಮವಾರ ಶಿರಸಿ ಶಾಸಕ ಭೀಮಣ್ಣ ನಾಯ್ಕ ಮೃತರ ಕುಟಂಬಗಳಿಗೆ ತೆರಳಿ ಸಾಂತ್ವಾನ ಹೇಳಿದರು.</p>.<p>ಜಿಲ್ಲಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸೋಮವಾರ ಸಂತ್ರಸ್ತರ ಮನೆಗೆ ತೆರಳಿ ಸಾಂತ್ವಾನ ಹೇಳಿ ಮೃತಪಟ್ಟ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ತಿಳಿಸಿದರು. ಸರ್ಕಾರದಿಂದ ಪರಿಹಾರ ಮಾತ್ರವಲ್ಲದೆ ಮೀನುಗಾರಿಕೆ ಇಲಾಖೆಯಿಂದಲೂ ಸಾಧ್ಯವಾದರೆ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-20-389775501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>