<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ಇಲ್ಲಿನ ವೆಂಕಟಾಪುರದ ಜಾಗಟೆಬೈಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೇವರ ಹೊರೆ ಇಳಿಸುತ್ತಿದ್ದ ಮುರಿನಕಟ್ಟೆಯನ್ನು ಭಾನುವಾರ ಬೆಳಿಗ್ಗೆ ಹಿಂದೂ ಜಾಗರಣ ವೇದಿಕೆಯವರು, ಸ್ಥಳೀಯರು ನಿರ್ಮಿಸಿದರು. ರಾತ್ರಿ ವೇಳೆಗೆ ಮುಸ್ಲಿಂ ಸಮುದಾಯದವರು ಅದನ್ನು ತೆರವುಗೊಳಿಸಿದರು.</p>.<p>ನಾಲ್ಕು ವರ್ಷಗಳ ಹಿಂದೆ ಹೆದ್ದಾರಿ ಕಾಮಗಾರಿ ಆರಂಭವಾದಾಗ ಮುರಿನಕಟ್ಟೆ ಪ್ರದೇಶವನ್ನು ತೆರವು ಗೊಳಿಸಲಾಗಿತ್ತು.</p>.<p>ಮುರಿನಕಟ್ಟೆ ಇದ್ದ ಸ್ಥಳದ ಹಿಂಬದಿ ಮುಸ್ಲಿಮರೊಬ್ಬರು ಮನೆ ಕಟ್ಟಲು ಸಿದ್ಧತೆ ನಡೆಸಿದ್ದರು. ಕಟ್ಟೆ ಜಾಗ ಒತ್ತುವರಿ ಆಗಬಹುದು ಎಂದು ಆಕ್ಷೇಪಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಟ್ಟೆ ನಿರ್ಮಿಸಿದ್ದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮುಸ್ಲಿಂ ಸಮುದಾಯದ ಕೆಲವರು ಕಟ್ಟೆ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದರು. ಕಟ್ಟೆ ಇದ್ದ ಜಾಗದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>ರಾತ್ರಿ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಕಟ್ಟೆ ತೆರವಿಗೆ ಒತ್ತಾಯಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಎದುರಿನಲ್ಲೇ ಕಟ್ಟೆ ಒಡೆದು ತೆರವುಗೊಳಿಸಿದರು.</p>.<p>ಘಟನೆಗೆ ಸಂಬಂಧಿಸಿ ತಡರಾತ್ರಿ ವರೆಗೂ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-1622547685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ಇಲ್ಲಿನ ವೆಂಕಟಾಪುರದ ಜಾಗಟೆಬೈಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೇವರ ಹೊರೆ ಇಳಿಸುತ್ತಿದ್ದ ಮುರಿನಕಟ್ಟೆಯನ್ನು ಭಾನುವಾರ ಬೆಳಿಗ್ಗೆ ಹಿಂದೂ ಜಾಗರಣ ವೇದಿಕೆಯವರು, ಸ್ಥಳೀಯರು ನಿರ್ಮಿಸಿದರು. ರಾತ್ರಿ ವೇಳೆಗೆ ಮುಸ್ಲಿಂ ಸಮುದಾಯದವರು ಅದನ್ನು ತೆರವುಗೊಳಿಸಿದರು.</p>.<p>ನಾಲ್ಕು ವರ್ಷಗಳ ಹಿಂದೆ ಹೆದ್ದಾರಿ ಕಾಮಗಾರಿ ಆರಂಭವಾದಾಗ ಮುರಿನಕಟ್ಟೆ ಪ್ರದೇಶವನ್ನು ತೆರವು ಗೊಳಿಸಲಾಗಿತ್ತು.</p>.<p>ಮುರಿನಕಟ್ಟೆ ಇದ್ದ ಸ್ಥಳದ ಹಿಂಬದಿ ಮುಸ್ಲಿಮರೊಬ್ಬರು ಮನೆ ಕಟ್ಟಲು ಸಿದ್ಧತೆ ನಡೆಸಿದ್ದರು. ಕಟ್ಟೆ ಜಾಗ ಒತ್ತುವರಿ ಆಗಬಹುದು ಎಂದು ಆಕ್ಷೇಪಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಟ್ಟೆ ನಿರ್ಮಿಸಿದ್ದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮುಸ್ಲಿಂ ಸಮುದಾಯದ ಕೆಲವರು ಕಟ್ಟೆ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದರು. ಕಟ್ಟೆ ಇದ್ದ ಜಾಗದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.</p>.<p>ರಾತ್ರಿ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಕಟ್ಟೆ ತೆರವಿಗೆ ಒತ್ತಾಯಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಎದುರಿನಲ್ಲೇ ಕಟ್ಟೆ ಒಡೆದು ತೆರವುಗೊಳಿಸಿದರು.</p>.<p>ಘಟನೆಗೆ ಸಂಬಂಧಿಸಿ ತಡರಾತ್ರಿ ವರೆಗೂ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-1622547685</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>