<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ‘ಮುರಿನಕಟ್ಟೆ ತೆರವುಗೊಳಿಸಿರುವ ಸ್ಥಳದಲ್ಲೇ ಕಟ್ಟೆಯನ್ನು ಪುನರ್ ನಿರ್ಮಿಸಬೇಕು. ಸರ್ಕಾರವೇ ಮುಂದಿನ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಆರ್.ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. </p>.<p>ಇಲ್ಲಿನ ಹಳೆಯ ಬಸ್ ನಿಲ್ದಾಣದ ಎದುರಿನಿಂದ ತಾಲ್ಲೂಕು ಆಡಳಿತ ಸೌಧದ ಆವರಣದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ‘ರಾಜ್ಯ ಸರ್ಕಾರದಿಂದ ಮುಸ್ಲಿಂ ಓಲೈಕೆ ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದರು.</p>.<p>‘ಹಿಂದೂಗಳ ಶ್ರದ್ಧಾ ಕೇಂದ್ರವಾದ ಮುರಿನಕಟ್ಟೆಗೆ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಸರ್ಕಾರ, ಮುರಿನಕಟ್ಟೆ ನಿರ್ಮಿಸದಿದ್ದರೆ ನಾನೇ ಮುಂದೆ ನಿಂತು ಕಟ್ಟೆ ನಿರ್ಮಿಸಿ<br>ಕೊಡುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಮಾಜಿ ಶಾಸಕರಾದ ಸುನೀಲ ನಾಯ್ಕ, ಶಿವಾನಂದ ನಾಯ್ಕ, ಸುನೀಲ ಹೆಗಡೆ ಇತರರಿದ್ದರು.</p>.<p>ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉತ್ತರ ಕನ್ನಡ ಜಿಲ್ಲೆ):</strong> ‘ಮುರಿನಕಟ್ಟೆ ತೆರವುಗೊಳಿಸಿರುವ ಸ್ಥಳದಲ್ಲೇ ಕಟ್ಟೆಯನ್ನು ಪುನರ್ ನಿರ್ಮಿಸಬೇಕು. ಸರ್ಕಾರವೇ ಮುಂದಿನ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಆರ್.ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. </p>.<p>ಇಲ್ಲಿನ ಹಳೆಯ ಬಸ್ ನಿಲ್ದಾಣದ ಎದುರಿನಿಂದ ತಾಲ್ಲೂಕು ಆಡಳಿತ ಸೌಧದ ಆವರಣದವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ‘ರಾಜ್ಯ ಸರ್ಕಾರದಿಂದ ಮುಸ್ಲಿಂ ಓಲೈಕೆ ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದರು.</p>.<p>‘ಹಿಂದೂಗಳ ಶ್ರದ್ಧಾ ಕೇಂದ್ರವಾದ ಮುರಿನಕಟ್ಟೆಗೆ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಸರ್ಕಾರ, ಮುರಿನಕಟ್ಟೆ ನಿರ್ಮಿಸದಿದ್ದರೆ ನಾನೇ ಮುಂದೆ ನಿಂತು ಕಟ್ಟೆ ನಿರ್ಮಿಸಿ<br>ಕೊಡುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಮಾಜಿ ಶಾಸಕರಾದ ಸುನೀಲ ನಾಯ್ಕ, ಶಿವಾನಂದ ನಾಯ್ಕ, ಸುನೀಲ ಹೆಗಡೆ ಇತರರಿದ್ದರು.</p>.<p>ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>