<p><strong>ಹಳಿಯಾಳ:</strong> ಭಟ್ಕಳ ಪಟ್ಟಣದ ಐತಿಹಾಸಿಕ ಮತ್ತು ಪವಿತ್ರ ಮುರುವಿನ ಕಟ್ಟೆ ಧ್ವಂಸ ಮಾಡಿರುವವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನಿಲ್ ಹೆಗಡೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ನೀಡಿದ್ದು, ಭಟ್ಕಳದ ಮುರುವಿನ ಕಟ್ಟೆ ಕೇವಲ ಕಲ್ಲಿನ ರಚನೆಯಲ್ಲ. ಇದು ನೂರಾರು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಸಮಾಜದ ನಂಬಿಕೆ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ ಎಂದಿದ್ದಾರೆ.</p>.<p>ಜಿಲ್ಲಾಡಳಿತ ಕೂಡಲೇ ಸತ್ಯಾಸತ್ಯತೆ ಬಹಿರಂಗಪಡಿಸಿ, ಮುರುವಿನ ಕಟ್ಟೆಯ ಧಾರ್ಮಿಕ ಪರಂಪರೆಗೆ ಧಕ್ಕೆ ಬಾರದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಪವಿತ್ರ ಸ್ಥಳ ಮುರುವಿನ ಕಟ್ಟೆಯನ್ನು ಶಾಸ್ತ್ರೋಕ್ತವಾಗಿ ಮರು ನಿರ್ಮಾಣ ಮಾಡಿ ಇದಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-1208037334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ:</strong> ಭಟ್ಕಳ ಪಟ್ಟಣದ ಐತಿಹಾಸಿಕ ಮತ್ತು ಪವಿತ್ರ ಮುರುವಿನ ಕಟ್ಟೆ ಧ್ವಂಸ ಮಾಡಿರುವವರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನಿಲ್ ಹೆಗಡೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಲಿಖಿತ ಪತ್ರಿಕಾ ಹೇಳಿಕೆ ನೀಡಿದ್ದು, ಭಟ್ಕಳದ ಮುರುವಿನ ಕಟ್ಟೆ ಕೇವಲ ಕಲ್ಲಿನ ರಚನೆಯಲ್ಲ. ಇದು ನೂರಾರು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಸಮಾಜದ ನಂಬಿಕೆ, ಸಂಸ್ಕೃತಿ ಮತ್ತು ಅಸ್ಮಿತೆಯ ಪ್ರತೀಕ ಎಂದಿದ್ದಾರೆ.</p>.<p>ಜಿಲ್ಲಾಡಳಿತ ಕೂಡಲೇ ಸತ್ಯಾಸತ್ಯತೆ ಬಹಿರಂಗಪಡಿಸಿ, ಮುರುವಿನ ಕಟ್ಟೆಯ ಧಾರ್ಮಿಕ ಪರಂಪರೆಗೆ ಧಕ್ಕೆ ಬಾರದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಪವಿತ್ರ ಸ್ಥಳ ಮುರುವಿನ ಕಟ್ಟೆಯನ್ನು ಶಾಸ್ತ್ರೋಕ್ತವಾಗಿ ಮರು ನಿರ್ಮಾಣ ಮಾಡಿ ಇದಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-1208037334</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>