<p><strong>ಭಟ್ಕಳ</strong>: ನಗರಸಭೆ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆ ಅಡಿಯಲ್ಲಿ ನೀರಿನ ಪೈಪ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಪುನಃ ಸರಿಪಡಿಸಿಕೊಡುವಂತೆ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಫಯಾಜ್ ಮುಲ್ಲಾ ಸೋಮವಾರ ಭಟ್ಕಳ ಉಪವಿಭಾಗಾಧಿಕಾರಿ ಜೆ. ಮಹೇಶ ಅವರಿಗೆ ಮನವಿ ಸಲ್ಲಿಸಿದರು.</p>.<p>ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 20 ಮತ್ತು 21 ನೇ ಶಾಜಿಸ್ಟ್ರೀಟ್, ಶೌಕತಲಿರೋಡ್, ತೇಕಿಯಾ ಸ್ಟ್ರೀಟ್, ಗೌಸಿಯಾ ಸ್ಟ್ರೀಟ್, ಫಾರೂಖ ಸ್ಟ್ರೀಟ್ ಮತ್ತು ಇತರೇ ರಸ್ತೆಗಳಲ್ಲಿ ಅಮೃತ್ 2.0 ಯೋಜನೆಯಡಿಯಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು ನೀರಾವರಿ ಪೈಪ್ ಅಳವಡಿಸಲು ಸುಸ್ಥಿತಿಯಲ್ಲಿದ್ದ ರಸ್ತೆಯನ್ನು, ಇಂಟರ್ಲಾಕ್ ಮತ್ತು ಡಾಂಬರ್ ರಸ್ತೆ ಅಗೆದು ಯಥಾ ಪ್ರಕಾರ ಇಂಟರ್ಲಾಕ್, ಡಾಂಬರ್ ಹಾಗೂ ಕಾಂಕ್ರೀಟ್ ಹಾಕಿ ಮುಚ್ಚದೇ ಹಾಗೇ ಬಿಟ್ಟಿರುವುದರಿಂದ ರಸ್ತೆಯಲ್ಲಿ ಹೊಂಡಗಳು ಬಿದ್ದಿದ್ದು, ದೂಳು ಏಳುತ್ತಿದೆ. ಇದರಿಂದ ಸಾರ್ವಜನಿಕರಿಗೆ ಓಡಾಡಲು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದರು.</p>.<p>ಮಳೆಗಾಲ ಪ್ರಾರಂಭವಾದಲ್ಲಿ ಇನ್ನೂ ದೊಡ್ಡ ಹೊಂಡಗಳು ಉಂಟಾಗಿ ಇನ್ನೂ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಮಳೆಗಾಲದ ಪೂರ್ವದಲ್ಲಿ ಅಗೆದ ರಸ್ತೆಗಳಿಗೆ ಆಯಾ ಸ್ಥಳದಲ್ಲಿರುವ ಇಂಟರ್ಲಾಕ್, ಡಾಂಬರ್ ಮತ್ತು ಕಾಂಕ್ರೀಟ್ ಹಾಕಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-20-1372412926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ನಗರಸಭೆ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆ ಅಡಿಯಲ್ಲಿ ನೀರಿನ ಪೈಪ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಪುನಃ ಸರಿಪಡಿಸಿಕೊಡುವಂತೆ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಫಯಾಜ್ ಮುಲ್ಲಾ ಸೋಮವಾರ ಭಟ್ಕಳ ಉಪವಿಭಾಗಾಧಿಕಾರಿ ಜೆ. ಮಹೇಶ ಅವರಿಗೆ ಮನವಿ ಸಲ್ಲಿಸಿದರು.</p>.<p>ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 20 ಮತ್ತು 21 ನೇ ಶಾಜಿಸ್ಟ್ರೀಟ್, ಶೌಕತಲಿರೋಡ್, ತೇಕಿಯಾ ಸ್ಟ್ರೀಟ್, ಗೌಸಿಯಾ ಸ್ಟ್ರೀಟ್, ಫಾರೂಖ ಸ್ಟ್ರೀಟ್ ಮತ್ತು ಇತರೇ ರಸ್ತೆಗಳಲ್ಲಿ ಅಮೃತ್ 2.0 ಯೋಜನೆಯಡಿಯಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು ನೀರಾವರಿ ಪೈಪ್ ಅಳವಡಿಸಲು ಸುಸ್ಥಿತಿಯಲ್ಲಿದ್ದ ರಸ್ತೆಯನ್ನು, ಇಂಟರ್ಲಾಕ್ ಮತ್ತು ಡಾಂಬರ್ ರಸ್ತೆ ಅಗೆದು ಯಥಾ ಪ್ರಕಾರ ಇಂಟರ್ಲಾಕ್, ಡಾಂಬರ್ ಹಾಗೂ ಕಾಂಕ್ರೀಟ್ ಹಾಕಿ ಮುಚ್ಚದೇ ಹಾಗೇ ಬಿಟ್ಟಿರುವುದರಿಂದ ರಸ್ತೆಯಲ್ಲಿ ಹೊಂಡಗಳು ಬಿದ್ದಿದ್ದು, ದೂಳು ಏಳುತ್ತಿದೆ. ಇದರಿಂದ ಸಾರ್ವಜನಿಕರಿಗೆ ಓಡಾಡಲು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದರು.</p>.<p>ಮಳೆಗಾಲ ಪ್ರಾರಂಭವಾದಲ್ಲಿ ಇನ್ನೂ ದೊಡ್ಡ ಹೊಂಡಗಳು ಉಂಟಾಗಿ ಇನ್ನೂ ಹೆಚ್ಚಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಮಳೆಗಾಲದ ಪೂರ್ವದಲ್ಲಿ ಅಗೆದ ರಸ್ತೆಗಳಿಗೆ ಆಯಾ ಸ್ಥಳದಲ್ಲಿರುವ ಇಂಟರ್ಲಾಕ್, ಡಾಂಬರ್ ಮತ್ತು ಕಾಂಕ್ರೀಟ್ ಹಾಕಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-20-1372412926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>