<p>ಗೋಕರ್ಣ: ಇತ್ತೀಚಿಗೆ ಭಟ್ಕಳದ ಶಾರದಾ ಹೊಳೆಯಲ್ಲಿ ನದಿಯಲ್ಲಿ ನಡೆದ ಜಲ ದುರಂತದಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ಕೂಡ ಮೀನುಗಾರರಂತೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಡಿ. ನಾಯ್ಕ ಆಗ್ರಹಿಸಿದರು.</p>.<p>ಅವರು ಬುಧವಾರ ಗೋಕರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಒಂದೇ ಕುಟುಂಬದ ಹಲವರು ಸೇರಿ 11 ಜನರು ಸಾವನ್ನಪ್ಪಿರುವುದು ನಿಜಕ್ಕೂ ದುರಂತವಾದದ್ದು. ರಾಜ್ಯ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಹಾಗೂ ಕೇಂದ್ರ ಸರ್ಕಾರ ತಲಾ ₹2 ಲಕ್ಷ ಘೋಷಿಸಿದೆ. ಆದರೆ ರಾಜ್ಯದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಮೀನುಗಾರರು ದುರಂತಕ್ಕೀಡಾದರೆ ರಾಜ್ಯ ಸರ್ಕಾರದಿಂದ ₹10 ಲಕ್ಷ ನೀಡಲಾಗುತ್ತದೆ. ಈ ಘಟನೆಯನ್ನು ಜಾತಿಯಿಂದ ಅಳೆಯದೇ ಕಸುಬಿನಿಂದ ಅಳೆದು ರಾಜ್ಯ ಸರ್ಕಾರ ಈ ಘಟನೆಯಲ್ಲಿ ಮೃತ ಪಟ್ಟವರಿಗೂ ತಲಾ ₹10 ಲಕ್ಷ ನೀಡಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಛರಿಸಿದರು.</p>.<p>ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಭಟ್ಕಳ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಧರ ನಾಯ್ಕ , ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಂಕೋಲಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ ಮಾತನಾಡಿದರು.</p>.<p>ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ ಗಂಗಾವಳಿ, ಅಂಕೋಲಾ ಘಟಕದ ಅಧ್ಯಕ್ಷ ದಾಮೋದರ ಜಿ. ನಾಯ್ಕ, ವರ್ಧನ ನಾಯ್ಕ ಬೇಲೆಕಾನ, ಅವಿನಾಶ ನಾಯ್ಕ ಮಧುರವಳ್ಳಿ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-1817634938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕರ್ಣ: ಇತ್ತೀಚಿಗೆ ಭಟ್ಕಳದ ಶಾರದಾ ಹೊಳೆಯಲ್ಲಿ ನದಿಯಲ್ಲಿ ನಡೆದ ಜಲ ದುರಂತದಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ಕೂಡ ಮೀನುಗಾರರಂತೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ ಡಿ. ನಾಯ್ಕ ಆಗ್ರಹಿಸಿದರು.</p>.<p>ಅವರು ಬುಧವಾರ ಗೋಕರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ಒಂದೇ ಕುಟುಂಬದ ಹಲವರು ಸೇರಿ 11 ಜನರು ಸಾವನ್ನಪ್ಪಿರುವುದು ನಿಜಕ್ಕೂ ದುರಂತವಾದದ್ದು. ರಾಜ್ಯ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಹಾಗೂ ಕೇಂದ್ರ ಸರ್ಕಾರ ತಲಾ ₹2 ಲಕ್ಷ ಘೋಷಿಸಿದೆ. ಆದರೆ ರಾಜ್ಯದಲ್ಲಿ ಮೀನುಗಾರಿಕೆಯ ಸಂದರ್ಭದಲ್ಲಿ ಮೀನುಗಾರರು ದುರಂತಕ್ಕೀಡಾದರೆ ರಾಜ್ಯ ಸರ್ಕಾರದಿಂದ ₹10 ಲಕ್ಷ ನೀಡಲಾಗುತ್ತದೆ. ಈ ಘಟನೆಯನ್ನು ಜಾತಿಯಿಂದ ಅಳೆಯದೇ ಕಸುಬಿನಿಂದ ಅಳೆದು ರಾಜ್ಯ ಸರ್ಕಾರ ಈ ಘಟನೆಯಲ್ಲಿ ಮೃತ ಪಟ್ಟವರಿಗೂ ತಲಾ ₹10 ಲಕ್ಷ ನೀಡಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಛರಿಸಿದರು.</p>.<p>ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಭಟ್ಕಳ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಧರ ನಾಯ್ಕ , ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಂಕೋಲಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ ಮಂಜಗುಣಿ ಮಾತನಾಡಿದರು.</p>.<p>ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ನಾಯ್ಕ ಗಂಗಾವಳಿ, ಅಂಕೋಲಾ ಘಟಕದ ಅಧ್ಯಕ್ಷ ದಾಮೋದರ ಜಿ. ನಾಯ್ಕ, ವರ್ಧನ ನಾಯ್ಕ ಬೇಲೆಕಾನ, ಅವಿನಾಶ ನಾಯ್ಕ ಮಧುರವಳ್ಳಿ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-1817634938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>