ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರೂ ಸೇರಿ ರಾಷ್ಟ್ರ ಮಟ್ಟದ ಕಲಾವಿದರಿಂದ ಮನೋರಂಜನೆ, ಧ್ಯಾನ, ಧಾರ್ಮಿಕ ಕಾರ್ಯಕ್ರಮ, ಪ್ರಥಮ ಬಾರಿಗೆ ಲೇಜರ್ ಶೋ ಮತ್ತು ತ್ರೀಡಿ ಮ್ಯಾಪಿಂಗ್ ಕಾರ್ಯಕ್ರಮ ನಡೆಯಲಿವೆ. ಗಾಯಕರಾ ಅನನ್ಯ ಭಟ್, ಶಂದ್ಯಾ ಯೋಗ, ಅಶ್ವಿನ್ ಶರ್ಮ, ವಿಧುಶ್ರೀ ವೀಣಾ ವಾರುಣಿ ಮತ್ತು ತಂಡ, ನಿರೂಪಕರಾದ ಪ್ರತಿಭಾ ಗೌಡ, ನಿರಂಜನ್ ದೇಶಪಾಂಡೆ, ಕಲಾವಿದರಾದ ಗಾನವಿ ಲಕ್ಷಣ್, ಬಿಗ್ಬಾಸ್ ವಿಜೇತ ಕಾರ್ತಿಕ್ ಮಹೇಶ ಮತ್ತು ತಂಡ, ತಾಲ್ಲೂಕಿನ ಕಲಾವಿದರು, ಭಟ್ಕಳದ ನೃತ್ಯ ತಂಡ, ಯಕ್ಷಗಾನ ತಂಡ ಪ್ರದರ್ಶನ ನೀಡಲಿದೆ ಎಂದು ಹೇಳಿದರು.