<p>ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲ್ಲೂಕಿನ ಮಾವಳ್ಳಿ ಕೇಂದ್ರದ ಮುಂಗಾರಿನ ಯಂತ್ರಶ್ರೀ ಭತ್ತ ನಾಟಿ ಕಾರ್ಯಕ್ಕೆ ಸಾರದಹೊಳೆಯ ರವೀಂದ್ರ ನಾಯ್ಕ ಅವರ ಗದ್ದೆಯಲ್ಲಿ ಈಚೆಗೆ ಚಾಲನೆ ನೀಡಲಾಯಿತು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲ್ಲೂಕು ಯೋಜನಾಧಿಕಾರಿ ಗಣೇಶ ನಾಯ್ಕ ಅವರು ನಾಟಿ ಯಂತ್ರ ಚಲಾಯಿಸುವ ಮೂಲಕ ಮುಂಗಾರಿನ ಪ್ರಥಮ ಭತ್ತ ನಾಟಿಗೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಒಟ್ಟು 700 ಎಕರೆಯಲ್ಲಿ ಯಾಂತ್ರಿಕೃತ ಭತ್ತ ಬೇಸಾಯ ಯಂತ್ರಶ್ರೀ ಗುರಿ ಹಾಕಲಾಗಿದೆ. ಇದರಿಂದ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೇ ವೆಚ್ಚವೂ ಕಡಿಮೆ ಆಗುವುದರಿಂದ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯಲು ಅನುಕೂಲವಾಗಿದೆ’ ಎಂದರು.</p>.<p>‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 6 ವರ್ಷದಿಂದ ರೈತರಿಗೆ ಮಾಹಿತಿ ನೀಡಿ, ಅಗತ್ಯದ ಟ್ರೇಗಳನ್ನು ನೀಡಿ ಸಸಿ ಮಡಿ ತಯಾರು ಮಾಡಿಸಿ ಯಂತ್ರಶ್ರೀ ಯಾಂತ್ರಿಕೃತ ಭತ್ತ ಬೇಸಾಯ ಮಾಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಸಿ.ಎಚ್.ಎಚ್.ಸಿ. ಮ್ಯಾನೇಜರ್ ಸುಮಂತ, ಕೃಷಿ ಮೇಲ್ವಿಚಾರಕ ಮಹೇಶ ಹೆಗಡೆ, ರೈತರಾದ ರವೀಂದ್ರ ನಾಯ್ಕ, ಯಂತ್ರಶ್ರೀ ಯಂತ್ರದ ಚಾಲಕ ಕುಮಾರ್. ಗೋಪಾಲ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲ್ಲೂಕಿನ ಮಾವಳ್ಳಿ ಕೇಂದ್ರದ ಮುಂಗಾರಿನ ಯಂತ್ರಶ್ರೀ ಭತ್ತ ನಾಟಿ ಕಾರ್ಯಕ್ಕೆ ಸಾರದಹೊಳೆಯ ರವೀಂದ್ರ ನಾಯ್ಕ ಅವರ ಗದ್ದೆಯಲ್ಲಿ ಈಚೆಗೆ ಚಾಲನೆ ನೀಡಲಾಯಿತು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲ್ಲೂಕು ಯೋಜನಾಧಿಕಾರಿ ಗಣೇಶ ನಾಯ್ಕ ಅವರು ನಾಟಿ ಯಂತ್ರ ಚಲಾಯಿಸುವ ಮೂಲಕ ಮುಂಗಾರಿನ ಪ್ರಥಮ ಭತ್ತ ನಾಟಿಗೆ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಒಟ್ಟು 700 ಎಕರೆಯಲ್ಲಿ ಯಾಂತ್ರಿಕೃತ ಭತ್ತ ಬೇಸಾಯ ಯಂತ್ರಶ್ರೀ ಗುರಿ ಹಾಕಲಾಗಿದೆ. ಇದರಿಂದ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೇ ವೆಚ್ಚವೂ ಕಡಿಮೆ ಆಗುವುದರಿಂದ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯಲು ಅನುಕೂಲವಾಗಿದೆ’ ಎಂದರು.</p>.<p>‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 6 ವರ್ಷದಿಂದ ರೈತರಿಗೆ ಮಾಹಿತಿ ನೀಡಿ, ಅಗತ್ಯದ ಟ್ರೇಗಳನ್ನು ನೀಡಿ ಸಸಿ ಮಡಿ ತಯಾರು ಮಾಡಿಸಿ ಯಂತ್ರಶ್ರೀ ಯಾಂತ್ರಿಕೃತ ಭತ್ತ ಬೇಸಾಯ ಮಾಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಸಿ.ಎಚ್.ಎಚ್.ಸಿ. ಮ್ಯಾನೇಜರ್ ಸುಮಂತ, ಕೃಷಿ ಮೇಲ್ವಿಚಾರಕ ಮಹೇಶ ಹೆಗಡೆ, ರೈತರಾದ ರವೀಂದ್ರ ನಾಯ್ಕ, ಯಂತ್ರಶ್ರೀ ಯಂತ್ರದ ಚಾಲಕ ಕುಮಾರ್. ಗೋಪಾಲ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>