ಸೋಮವಾರ ನಗರದ ಮಾರಿಕಾಂಬಾ ದೇವಾಲಯ, ದೊಡ್ಡ ಗಣಪತಿ ದೇವಶಲಯಗಳಲ್ಲಿ ಪೂಜೆ ಸಲ್ಲಿಸಿದ ಭೀಮಣ್ಣ ನಾಯ್ಕ ಅವರು ಝೂ ಸರ್ಕಲ್ ಬಳಿಯಿಂದ ಚುನಾವಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಆಡಳಿತದಲ್ಲಿ ಇರುವ ಶಾಸಕರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಏನು? ಸಚಿವರು, ವಿಧಾನಸಭಾಧ್ಯಕ್ಷರಾಗಿ ನಿಮ್ಮ ಕೊಡುಗೆ ಎಷ್ಟು? ಎಂಬುದನ್ನು ಜನತೆಗೆ ಹೇಳಬೇಕು ಎಂದರು. ಕ್ಷೇತ್ರದ ಕಟ್ಟಕಡೆಯ ಹಳ್ಳಿಯೂ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಡೆಸಬೇಕು. ಆದರೆ ಬಿಜೆಪಿ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ, ನಿರುದ್ಯೋಗದಂಥ ಸಮಸ್ಯೆ ಹೆಚ್ಚಿದೆ. ಈ ಎಲ್ಲ ಕಾರಣಕ್ಕೆ ಇಂದು ಬಿಜೆಪಿ ಜನತೆಗೆ ಬೇಡವಾಗಿದೆ. ಆ ಪಕ್ಷದ ಪ್ರಮುಖರೇ ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಹುಮತ ಪಡೆಯಲಿದೆ. ಜಿಲ್ಲೆಯಲ್ಲಿ 6 ಕ್ಷೇತ್ರವೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.