<p><strong>ಶಿರಸಿ</strong>: ಶಿರಸಿ ಸಿದ್ದಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನೂರಾರು ಬೆಂಬಲಿಗರ ಜೊತೆ ತೆರೆದ ಜೀಪ್ ನಲ್ಲಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. </p>.<p>ಸೋಮವಾರ ನಗರದ ಮಾರಿಕಾಂಬಾ ದೇವಾಲಯ, ದೊಡ್ಡ ಗಣಪತಿ ದೇವಶಲಯಗಳಲ್ಲಿ ಪೂಜೆ ಸಲ್ಲಿಸಿದ ಭೀಮಣ್ಣ ನಾಯ್ಕ ಅವರು ಝೂ ಸರ್ಕಲ್ ಬಳಿಯಿಂದ ಚುನಾವಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಆಡಳಿತದಲ್ಲಿ ಇರುವ ಶಾಸಕರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಏನು? ಸಚಿವರು, ವಿಧಾನಸಭಾಧ್ಯಕ್ಷರಾಗಿ ನಿಮ್ಮ ಕೊಡುಗೆ ಎಷ್ಟು? ಎಂಬುದನ್ನು ಜನತೆಗೆ ಹೇಳಬೇಕು ಎಂದರು. ಕ್ಷೇತ್ರದ ಕಟ್ಟಕಡೆಯ ಹಳ್ಳಿಯೂ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಡೆಸಬೇಕು. ಆದರೆ ಬಿಜೆಪಿ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ, ನಿರುದ್ಯೋಗದಂಥ ಸಮಸ್ಯೆ ಹೆಚ್ಚಿದೆ. ಈ ಎಲ್ಲ ಕಾರಣಕ್ಕೆ ಇಂದು ಬಿಜೆಪಿ ಜನತೆಗೆ ಬೇಡವಾಗಿದೆ. ಆ ಪಕ್ಷದ ಪ್ರಮುಖರೇ ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಹುಮತ ಪಡೆಯಲಿದೆ. ಜಿಲ್ಲೆಯಲ್ಲಿ 6 ಕ್ಷೇತ್ರವೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. </p>.<p>ನಂತರ ಪಕ್ಷದ ಪ್ರಮುಖರಾದ ವಸಂತ ನಾಯ್ಕ, ರವೀಂದ್ರ ನಾಯ್ಕ, ಜಗದೀಶ ಗೌಡ, ಪತ್ನಿ ಗೀತಾ ನಾಯ್ಕ ಜೊತೆಗೂಡಿ ನಾಮಪತ್ರ ಸಲ್ಲಿಕೆಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಶಿರಸಿ ಸಿದ್ದಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನೂರಾರು ಬೆಂಬಲಿಗರ ಜೊತೆ ತೆರೆದ ಜೀಪ್ ನಲ್ಲಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. </p>.<p>ಸೋಮವಾರ ನಗರದ ಮಾರಿಕಾಂಬಾ ದೇವಾಲಯ, ದೊಡ್ಡ ಗಣಪತಿ ದೇವಶಲಯಗಳಲ್ಲಿ ಪೂಜೆ ಸಲ್ಲಿಸಿದ ಭೀಮಣ್ಣ ನಾಯ್ಕ ಅವರು ಝೂ ಸರ್ಕಲ್ ಬಳಿಯಿಂದ ಚುನಾವಣಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಆಡಳಿತದಲ್ಲಿ ಇರುವ ಶಾಸಕರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಏನು? ಸಚಿವರು, ವಿಧಾನಸಭಾಧ್ಯಕ್ಷರಾಗಿ ನಿಮ್ಮ ಕೊಡುಗೆ ಎಷ್ಟು? ಎಂಬುದನ್ನು ಜನತೆಗೆ ಹೇಳಬೇಕು ಎಂದರು. ಕ್ಷೇತ್ರದ ಕಟ್ಟಕಡೆಯ ಹಳ್ಳಿಯೂ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಡೆಸಬೇಕು. ಆದರೆ ಬಿಜೆಪಿ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ, ನಿರುದ್ಯೋಗದಂಥ ಸಮಸ್ಯೆ ಹೆಚ್ಚಿದೆ. ಈ ಎಲ್ಲ ಕಾರಣಕ್ಕೆ ಇಂದು ಬಿಜೆಪಿ ಜನತೆಗೆ ಬೇಡವಾಗಿದೆ. ಆ ಪಕ್ಷದ ಪ್ರಮುಖರೇ ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿ ಮುಕ್ತ ಕರ್ನಾಟಕಕ್ಕೆ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಹುಮತ ಪಡೆಯಲಿದೆ. ಜಿಲ್ಲೆಯಲ್ಲಿ 6 ಕ್ಷೇತ್ರವೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. </p>.<p>ನಂತರ ಪಕ್ಷದ ಪ್ರಮುಖರಾದ ವಸಂತ ನಾಯ್ಕ, ರವೀಂದ್ರ ನಾಯ್ಕ, ಜಗದೀಶ ಗೌಡ, ಪತ್ನಿ ಗೀತಾ ನಾಯ್ಕ ಜೊತೆಗೂಡಿ ನಾಮಪತ್ರ ಸಲ್ಲಿಕೆಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>