ಬೈಕ್ ನಾರಾಯಣಪುರದಿಂದ ಲಿಂಗದಬೈಲಿಗೆ ಪ್ರಯಾಣಿಸುತ್ತಿತ್ತು. ಹಿಂದಿನಿಂದ ಬಂದ ಲಾರಿ ಓವರ್ ಟೇಕ್ ಮಾಡುವ ಬರದಲ್ಲಿ ಬೈಕಿನ ಹ್ಯಾಂಡಲ್ ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಬೈಕ್ ಸಹ ಸವಾರ ವೆಂಕಟ್ರಮಣ ಗೋಪಾಲ ಸಿದ್ದಿ ಯಲ್ಲಾಪುರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.