<p><strong>ಶಿರಸಿ:</strong> ‘ಭಯೋತ್ಪಾದನಾ ಚಟುವಟಿಕೆಯ ಮನಸ್ಥಿತಿ ಹೊಂದಿರುವವರನ್ನು ಸರ್ಕಾರ ಸಹಿಸಲ್ಲ. ಅವರನ್ನು ಮಟ್ಟ ಹಾಕುತ್ತೇವೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಅಭಿವೃದ್ಧಿ ಆಧಾರದಲ್ಲಿ ಎದುರಿಸುತ್ತೇವೆ’ ಎಂದುಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಇಲ್ಲಿನ ಸಂಘಧಾಮದ ಬಳಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಾಲಯ ಕಟ್ಟಡದ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮುಂದಿನ ಚುನಾವಣೆ ರಾಷ್ಟ್ರವಾದ ಮತ್ತು ಅದಕ್ಕೆ ವಿರುದ್ಧವಾದ ಸಿದ್ಧಾಂತ ಹೊಂದಿದವರ ನಡುವಿನ ಸ್ಪರ್ಧೆಯಾದರೂ ಅಚ್ಚರಿ ಪಡಬೇಕಿಲ್ಲ. ಆದರೆ ಬಿಜೆಪಿ ಸರ್ಕಾರ ಅಭಿವೃದ್ಧಿ ಚಟುವಟಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಹೀಗಾಗಿ ಮತ ಕೇಳಲು ಅಭಿವೃದ್ಧಿ ಅಜೆಂಡಾ ಬಳಸುತ್ತೇವೆ’ ಎಂದರು.</p>.<p>‘ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಾಗುತ್ತಿದೆ. ಇಸ್ವತ್ತು ಸಮಸ್ಯೆಗೆ ಸಭೆ ನಡೆದಿದೆ. ಮುಂದಿನ ಚುನಾವಣೆಯಲ್ಲಿ ಆರು ಕ್ಷೇತ್ರ ಬಿಜೆಪಿ ಪಾಲಾಗಲಿದೆ’ ಎಂದರು.</p>.<p>‘ಕುಮಟಾದಲ್ಲಿ ಪಕ್ಷದ ಜಿಲ್ಲಾ ಕಚೇರಿ ತೆರೆಯಲು ಆಗ್ರಹಿಸಿದ್ದೆ. ಮುಖಂಡರು ಘಟ್ಟದ ಮೇಲಿನ ತಾಲ್ಲೂಕುಗಳಂತೆ ಕರಾವಳಿ ಭಾಗದ ಬಗ್ಗೆಯೂ ಯೋಚಿಸಬೇಕು. ಪಕ್ಷದ ರಾಷ್ಟ್ರೀಯ ನಾಯಕರನ್ನು ಜಿಲ್ಲೆಗೆ ಕರೆತರುವ ಕೆಲಸ ಆಗಬೇಕು’ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ‘₹5 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಆಗಲಿದೆ. ಕಟ್ಟಡ ನಿರ್ಮಾಣಕ್ಕೆ ಕಾರ್ಯಕರ್ತರಿಂದ ನಿಧಿ ಸಂಗ್ರಹಣೆ ಮಾಡಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬಿಜೆಪಿ ವಿಭಾಗೀಯ ಕಾರ್ಯದರ್ಶಿ ಗಿರೀಶ ಪಾಟೀಲ್, ಬಿಜೆಪಿ ಮುಖಂಡರಾದ ಯಶಪಾಲ್ ಸುವರ್ಣ, ನಯನ ಗಣೇಶ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಭಯೋತ್ಪಾದನಾ ಚಟುವಟಿಕೆಯ ಮನಸ್ಥಿತಿ ಹೊಂದಿರುವವರನ್ನು ಸರ್ಕಾರ ಸಹಿಸಲ್ಲ. ಅವರನ್ನು ಮಟ್ಟ ಹಾಕುತ್ತೇವೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಅಭಿವೃದ್ಧಿ ಆಧಾರದಲ್ಲಿ ಎದುರಿಸುತ್ತೇವೆ’ ಎಂದುಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಇಲ್ಲಿನ ಸಂಘಧಾಮದ ಬಳಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಾಲಯ ಕಟ್ಟಡದ ಕಾಮಗಾರಿಗೆ ಗುರುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಮುಂದಿನ ಚುನಾವಣೆ ರಾಷ್ಟ್ರವಾದ ಮತ್ತು ಅದಕ್ಕೆ ವಿರುದ್ಧವಾದ ಸಿದ್ಧಾಂತ ಹೊಂದಿದವರ ನಡುವಿನ ಸ್ಪರ್ಧೆಯಾದರೂ ಅಚ್ಚರಿ ಪಡಬೇಕಿಲ್ಲ. ಆದರೆ ಬಿಜೆಪಿ ಸರ್ಕಾರ ಅಭಿವೃದ್ಧಿ ಚಟುವಟಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಹೀಗಾಗಿ ಮತ ಕೇಳಲು ಅಭಿವೃದ್ಧಿ ಅಜೆಂಡಾ ಬಳಸುತ್ತೇವೆ’ ಎಂದರು.</p>.<p>‘ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಾಗುತ್ತಿದೆ. ಇಸ್ವತ್ತು ಸಮಸ್ಯೆಗೆ ಸಭೆ ನಡೆದಿದೆ. ಮುಂದಿನ ಚುನಾವಣೆಯಲ್ಲಿ ಆರು ಕ್ಷೇತ್ರ ಬಿಜೆಪಿ ಪಾಲಾಗಲಿದೆ’ ಎಂದರು.</p>.<p>‘ಕುಮಟಾದಲ್ಲಿ ಪಕ್ಷದ ಜಿಲ್ಲಾ ಕಚೇರಿ ತೆರೆಯಲು ಆಗ್ರಹಿಸಿದ್ದೆ. ಮುಖಂಡರು ಘಟ್ಟದ ಮೇಲಿನ ತಾಲ್ಲೂಕುಗಳಂತೆ ಕರಾವಳಿ ಭಾಗದ ಬಗ್ಗೆಯೂ ಯೋಚಿಸಬೇಕು. ಪಕ್ಷದ ರಾಷ್ಟ್ರೀಯ ನಾಯಕರನ್ನು ಜಿಲ್ಲೆಗೆ ಕರೆತರುವ ಕೆಲಸ ಆಗಬೇಕು’ ಎಂದು ಕುಮಟಾ ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ನಾಯಕ, ‘₹5 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಆಗಲಿದೆ. ಕಟ್ಟಡ ನಿರ್ಮಾಣಕ್ಕೆ ಕಾರ್ಯಕರ್ತರಿಂದ ನಿಧಿ ಸಂಗ್ರಹಣೆ ಮಾಡಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬಿಜೆಪಿ ವಿಭಾಗೀಯ ಕಾರ್ಯದರ್ಶಿ ಗಿರೀಶ ಪಾಟೀಲ್, ಬಿಜೆಪಿ ಮುಖಂಡರಾದ ಯಶಪಾಲ್ ಸುವರ್ಣ, ನಯನ ಗಣೇಶ್, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>