<p><strong>ಶಿರಸಿ:</strong> ‘ಕಾಂಗ್ರೆಸ್ ವಿಫಲತೆಯ ಕುರಿತು ಯಾರೊಬ್ಬರೂ ಧ್ವನಿ ಎತ್ತದಂತೆ, ಸಾರ್ವಜನಿಕರ ಧ್ವನಿ ಅಡಗಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಣಯದಿಂದ ಕಾಂಗ್ರೆಸ್ ನಾಶವಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಟೀಕಿಸಿದರು.</p>.<p>ನಗರದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಬುಧವಾರ ನಡೆದ ಬಿಜೆಪಿ ನಗರ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಭವಿಷ್ಯದಲ್ಲಿ ಸರ್ಕಾರದ ವಿರುದ್ಧ ಯಾರೂ ಮಾತನಾಡದ ಸ್ಥಿತಿ ನಿರ್ಮಾಣ ಆಗಲಿದೆ’ ಎಂದರು. </p>.<p>ಪಕ್ಷದ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ಮಾತನಾಡಿ, ‘ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ’ ಎಂದರು.</p>.<p>‘ಉದ್ದೇಶಿತ ಮಸೂದೆಯು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ. ಕಾರಣ ಈ ಮಸೂದೆ ಜಾರಿಗೆ ಅವಕಾಶ ನೀಡಬಾರದು’ ಎಂದು ಮನವಿ ಮೂಲಕ ಒತ್ತಾಯಿಸಿದರು. </p>.<p>ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ. ಮನವಿ ಸ್ವೀಕರಿಸಿದರು. ಪಕ್ಷದ ಪ್ರಮುಖರಾದ ಆನಂದ ಸಾಲೇರ, ಮಹಂತೇಶ ಹಾದಿಮನಿ, ಶರ್ಮಿಳಾ ಮಾದನಗೇರಿ, ವೀಣಾ ಶೆಟ್ಟಿ, ನಿರ್ಮಲಾ ಶೆಟ್ಟಿ, ನಂದನ ಸಾಗರ, ಅನಂತಮೂರ್ತಿ ಹೆಗಡೆ, ನವೀನ ಶೆಟ್ಟಿ, ಶ್ರೀಕಾಂತ ಬಳ್ಳಾರಿ, ಶ್ರೀನಿವಾಸ ಹೆಬ್ಬಾರ, ಆರ್.ವಿ.ಹೆಗಡೆ ಇದ್ದರು.</p>.<div><blockquote>ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸ್ವಕ್ಷೇತ್ರವಾದ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ. ಇದು ಜಿಲ್ಲೆಯಲ್ಲಿ ಕಾಂಗ್ರೆಸ್ ವಿಫಲತೆಗೆ ಸಾಕ್ಷಿಯಾಗಿದೆ</blockquote><span class="attribution">ಗುರುಪ್ರಸಾದ ಹೆಗಡೆ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಕಾಂಗ್ರೆಸ್ ವಿಫಲತೆಯ ಕುರಿತು ಯಾರೊಬ್ಬರೂ ಧ್ವನಿ ಎತ್ತದಂತೆ, ಸಾರ್ವಜನಿಕರ ಧ್ವನಿ ಅಡಗಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಣಯದಿಂದ ಕಾಂಗ್ರೆಸ್ ನಾಶವಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಟೀಕಿಸಿದರು.</p>.<p>ನಗರದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಬುಧವಾರ ನಡೆದ ಬಿಜೆಪಿ ನಗರ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಭವಿಷ್ಯದಲ್ಲಿ ಸರ್ಕಾರದ ವಿರುದ್ಧ ಯಾರೂ ಮಾತನಾಡದ ಸ್ಥಿತಿ ನಿರ್ಮಾಣ ಆಗಲಿದೆ’ ಎಂದರು. </p>.<p>ಪಕ್ಷದ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ಮಾತನಾಡಿ, ‘ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ’ ಎಂದರು.</p>.<p>‘ಉದ್ದೇಶಿತ ಮಸೂದೆಯು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ. ಕಾರಣ ಈ ಮಸೂದೆ ಜಾರಿಗೆ ಅವಕಾಶ ನೀಡಬಾರದು’ ಎಂದು ಮನವಿ ಮೂಲಕ ಒತ್ತಾಯಿಸಿದರು. </p>.<p>ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ. ಮನವಿ ಸ್ವೀಕರಿಸಿದರು. ಪಕ್ಷದ ಪ್ರಮುಖರಾದ ಆನಂದ ಸಾಲೇರ, ಮಹಂತೇಶ ಹಾದಿಮನಿ, ಶರ್ಮಿಳಾ ಮಾದನಗೇರಿ, ವೀಣಾ ಶೆಟ್ಟಿ, ನಿರ್ಮಲಾ ಶೆಟ್ಟಿ, ನಂದನ ಸಾಗರ, ಅನಂತಮೂರ್ತಿ ಹೆಗಡೆ, ನವೀನ ಶೆಟ್ಟಿ, ಶ್ರೀಕಾಂತ ಬಳ್ಳಾರಿ, ಶ್ರೀನಿವಾಸ ಹೆಬ್ಬಾರ, ಆರ್.ವಿ.ಹೆಗಡೆ ಇದ್ದರು.</p>.<div><blockquote>ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸ್ವಕ್ಷೇತ್ರವಾದ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ. ಇದು ಜಿಲ್ಲೆಯಲ್ಲಿ ಕಾಂಗ್ರೆಸ್ ವಿಫಲತೆಗೆ ಸಾಕ್ಷಿಯಾಗಿದೆ</blockquote><span class="attribution">ಗುರುಪ್ರಸಾದ ಹೆಗಡೆ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>