<p><strong>ಕಾರವಾರ/ಯಲ್ಲಾಪುರ:</strong> ‘ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಮಿತಿಮೀರಿದ್ದು, ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.</p>.<p>ಯಲ್ಲಾಪುರದ ವೈಟಿಎಸ್ಎಸ್ ಮೈದಾನದಲ್ಲಿ ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸರ್ಕಾರದ ನಡೆ ಟೀಕಿಸುವವರು, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವವರ ವಿರುದ್ಧ ಪ್ರಕರಣ ದಾಖಲಿಸಿ ಬೆದರಿಸುವ ಕೆಲಸ ನಡೆದಿದೆ’ ಎಂದು ಆರೋಪಿಸಿದರು.</p>.<p>‘ಬೆದರಿಕೆಗೆ ಕಾರ್ಯಕರ್ತರು ಹೆದರುವುದಿಲ್ಲ. ಅವರ ಸಹನೆ ಮಿತಿಮೀರಲು ಅವಕಾಶ ನೀಡದಿರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ ಸಿಬ್ಬಂದಿಗೆ ಮಾಸಿಕ ವೇತನ ನೀಡಲು ವಿಳಂಬ ಆಗುತ್ತಿದೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ನೆನಪಿನಲ್ಲಿಡಿ’ ಎಂದರು.</p>.<p>‘ಯಲ್ಲಾಪುರದ ಶಾಸಕರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳ ಕಾಮಗಾರಿಗಳನ್ನೇ ಇಂದಿಗೂ ಉದ್ಘಾಟಿಸುತ್ತಿದ್ದಾರೆ. ಈ ಕ್ಷೇತ್ರದ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ಯಾವುದೇ ಕ್ಷಣ ವಿಧಾನಸಭೆಗೆ ಚುನಾವಣೆ ಎದುರಾದರೂ ಯಲ್ಲಾಪುರ ಕ್ಷೇತ್ರದಿಂದ ಸಾಮಾನ್ಯ ಕಾರ್ಯಕರ್ತರೊಬ್ಬರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇನೆ’ ಎಂದು ಸಮಾವೇಶದಲ್ಲಿ ಪಾಲ್ಗೊಳ್ಳದ ಶಾಸಕ ಶಿವರಾಮ ಹೆಬ್ಬಾರ ಅವರ ಹೆಸರು ಹೇಳದೇ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.</p>.<p>‘ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿದಾಗ, ರಾಜ್ಯದಲ್ಲಿ ಬೆಲೆ ಏರಿಕೆ ವಿಚಾರ, ಸರ್ಕಾರದ ದುರಾಡಳಿತ ಚರ್ಚೆಯಾದಾಗಲೆಲ್ಲ, ಜಾತಿ ಜನಗಣತಿ ವರದಿ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನೆಲೆಗೆ ತರುತ್ತಾರೆ. ಇದು ಅವರ ಪಾಲಿಗೆ ಬೆದರು ಗೊಂಬೆಯಂತಾಗಿದೆ’ ಎಂದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮುಖಂಡ ನಳಿನ್ಕುಮಾರ್ ಕಟೀಲ್ ಇದ್ದರು.</p>.<div><blockquote>ಜನಾಕ್ರೋಶ ಯಾತ್ರೆ ಆರಂಭಗೊಂಡ ಮೂರೆ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಅದರ ಬಿಸಿ ತಟ್ಟಿದೆ. ಹೀಗಾಗಿಯೇ ಡಿ.ಕೆ.ಶಿವಕುಮಾರ್ ಏ.17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಕರೆ ನೀಡಿದ್ದಾರೆ. </blockquote><span class="attribution">-ಬಿ.ವೈ.ವಿಜಯೇಂದ್ರ ಅಧ್ಯಕ್ಷ ಬಿಜೆಪಿ ರಾಜ್ಯ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ/ಯಲ್ಲಾಪುರ:</strong> ‘ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಮಿತಿಮೀರಿದ್ದು, ಕಾರ್ಯಕರ್ತರು ಬಡಿಗೆ ಹಿಡಿದು ಠಾಣೆಗೆ ನುಗ್ಗುವ ದಿನ ದೂರವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.</p>.<p>ಯಲ್ಲಾಪುರದ ವೈಟಿಎಸ್ಎಸ್ ಮೈದಾನದಲ್ಲಿ ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಸರ್ಕಾರದ ನಡೆ ಟೀಕಿಸುವವರು, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವವರ ವಿರುದ್ಧ ಪ್ರಕರಣ ದಾಖಲಿಸಿ ಬೆದರಿಸುವ ಕೆಲಸ ನಡೆದಿದೆ’ ಎಂದು ಆರೋಪಿಸಿದರು.</p>.<p>‘ಬೆದರಿಕೆಗೆ ಕಾರ್ಯಕರ್ತರು ಹೆದರುವುದಿಲ್ಲ. ಅವರ ಸಹನೆ ಮಿತಿಮೀರಲು ಅವಕಾಶ ನೀಡದಿರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ ಸಿಬ್ಬಂದಿಗೆ ಮಾಸಿಕ ವೇತನ ನೀಡಲು ವಿಳಂಬ ಆಗುತ್ತಿದೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ನೆನಪಿನಲ್ಲಿಡಿ’ ಎಂದರು.</p>.<p>‘ಯಲ್ಲಾಪುರದ ಶಾಸಕರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳ ಕಾಮಗಾರಿಗಳನ್ನೇ ಇಂದಿಗೂ ಉದ್ಘಾಟಿಸುತ್ತಿದ್ದಾರೆ. ಈ ಕ್ಷೇತ್ರದ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ಯಾವುದೇ ಕ್ಷಣ ವಿಧಾನಸಭೆಗೆ ಚುನಾವಣೆ ಎದುರಾದರೂ ಯಲ್ಲಾಪುರ ಕ್ಷೇತ್ರದಿಂದ ಸಾಮಾನ್ಯ ಕಾರ್ಯಕರ್ತರೊಬ್ಬರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇನೆ’ ಎಂದು ಸಮಾವೇಶದಲ್ಲಿ ಪಾಲ್ಗೊಳ್ಳದ ಶಾಸಕ ಶಿವರಾಮ ಹೆಬ್ಬಾರ ಅವರ ಹೆಸರು ಹೇಳದೇ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.</p>.<p>‘ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿದಾಗ, ರಾಜ್ಯದಲ್ಲಿ ಬೆಲೆ ಏರಿಕೆ ವಿಚಾರ, ಸರ್ಕಾರದ ದುರಾಡಳಿತ ಚರ್ಚೆಯಾದಾಗಲೆಲ್ಲ, ಜಾತಿ ಜನಗಣತಿ ವರದಿ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನೆಲೆಗೆ ತರುತ್ತಾರೆ. ಇದು ಅವರ ಪಾಲಿಗೆ ಬೆದರು ಗೊಂಬೆಯಂತಾಗಿದೆ’ ಎಂದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮುಖಂಡ ನಳಿನ್ಕುಮಾರ್ ಕಟೀಲ್ ಇದ್ದರು.</p>.<div><blockquote>ಜನಾಕ್ರೋಶ ಯಾತ್ರೆ ಆರಂಭಗೊಂಡ ಮೂರೆ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಅದರ ಬಿಸಿ ತಟ್ಟಿದೆ. ಹೀಗಾಗಿಯೇ ಡಿ.ಕೆ.ಶಿವಕುಮಾರ್ ಏ.17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಕರೆ ನೀಡಿದ್ದಾರೆ. </blockquote><span class="attribution">-ಬಿ.ವೈ.ವಿಜಯೇಂದ್ರ ಅಧ್ಯಕ್ಷ ಬಿಜೆಪಿ ರಾಜ್ಯ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>