<p><strong>ಶಿರಸಿ:</strong> ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವದಿಂದ ಮಾತನಾಡಿರುವುದು ಖಂಡಿಸುವ ಜತೆ ಕ್ಷಮೆ ಕೇಳುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.</p>.<p>ಗುರುವಾರ ನಗರದ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತೆಯರು, ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹಾಗೂ ಹಗುರವಾದ ಭಾಷೆಯಲ್ಲಿ ಕೇಂದ್ರ ಸಚಿವೆಯನ್ನು ಸಂಬೋಧಿಸಿದ್ದು ಖಂಡನೀಯ. ಇದು ಕೇವಲ ಅವರಿಗೆ ಮಾತ್ರವಲ್ಲದೆ ಇಡೀ ಸ್ತ್ರೀಕುಲಕ್ಕೆ ಮಾಡಿದ ಅಪಮಾನವಾಗಿದೆ' ಎಂದು ಟೀಕಿಸಿದರು.</p>.<p>‘ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕುರಿತಾಗಿ ಮಾತನಾಡುವಾಗ ಅತ್ಯಂತ ಗೌರವಯುತವಾಗಿ ಪದ ಪ್ರಯೋಗಗಳನ್ನು ಮಾಡುತ್ತಾರೆ. ಅದೇ ಇತರ ಪಕ್ಷದ ಮಹಿಳಾ ನಾಯಕಿಯರ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಸಲ್ಲಿಸಿದರು.</p>.<p>‘ಸಿದ್ಧರಾಮಯ್ಯನವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಸಮಾಜದ ಸಮಸ್ತ ಮಹಿಳೆಯರ ಬೇಷರತ್ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.</p>.<p>ಈ ವೇಳೆ ಕಚೇರಿಯ ಅಧಿಕಾರಿ ಡಿ.ಆರ್. ಬೆಳ್ಳಿಮನೆ ಮನವಿ ಸ್ವೀಕರಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಶಿವಾನಿ ಭಟ್ಕಳ, ಪ್ರಮುಖರಾದ ರೇಖಾ ಹೆಗಡೆ, ಕವಿತಾ ಭಟ್, ಅನಸೂಯಾ ಹೆಗಡೆ, ರಾಧಿಕಾ ನಾಯ್ಕ, ಪವಿತ್ರಾ ಹೊಸೂರು, ಶೋಭಾ ಗೌಡ, ಶಿಲ್ಪಾ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವದಿಂದ ಮಾತನಾಡಿರುವುದು ಖಂಡಿಸುವ ಜತೆ ಕ್ಷಮೆ ಕೇಳುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.</p>.<p>ಗುರುವಾರ ನಗರದ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತೆಯರು, ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹಾಗೂ ಹಗುರವಾದ ಭಾಷೆಯಲ್ಲಿ ಕೇಂದ್ರ ಸಚಿವೆಯನ್ನು ಸಂಬೋಧಿಸಿದ್ದು ಖಂಡನೀಯ. ಇದು ಕೇವಲ ಅವರಿಗೆ ಮಾತ್ರವಲ್ಲದೆ ಇಡೀ ಸ್ತ್ರೀಕುಲಕ್ಕೆ ಮಾಡಿದ ಅಪಮಾನವಾಗಿದೆ' ಎಂದು ಟೀಕಿಸಿದರು.</p>.<p>‘ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕುರಿತಾಗಿ ಮಾತನಾಡುವಾಗ ಅತ್ಯಂತ ಗೌರವಯುತವಾಗಿ ಪದ ಪ್ರಯೋಗಗಳನ್ನು ಮಾಡುತ್ತಾರೆ. ಅದೇ ಇತರ ಪಕ್ಷದ ಮಹಿಳಾ ನಾಯಕಿಯರ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಸಲ್ಲಿಸಿದರು.</p>.<p>‘ಸಿದ್ಧರಾಮಯ್ಯನವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಸಮಾಜದ ಸಮಸ್ತ ಮಹಿಳೆಯರ ಬೇಷರತ್ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.</p>.<p>ಈ ವೇಳೆ ಕಚೇರಿಯ ಅಧಿಕಾರಿ ಡಿ.ಆರ್. ಬೆಳ್ಳಿಮನೆ ಮನವಿ ಸ್ವೀಕರಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಶಿವಾನಿ ಭಟ್ಕಳ, ಪ್ರಮುಖರಾದ ರೇಖಾ ಹೆಗಡೆ, ಕವಿತಾ ಭಟ್, ಅನಸೂಯಾ ಹೆಗಡೆ, ರಾಧಿಕಾ ನಾಯ್ಕ, ಪವಿತ್ರಾ ಹೊಸೂರು, ಶೋಭಾ ಗೌಡ, ಶಿಲ್ಪಾ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>