ಈ ಸಂದರ್ಭದಲ್ಲಿ ಮಾತನಾಡಿದ ಯುವ ಮೊರ್ಚಾದ ನಗರ ಘಟಕ ಅಧ್ಯಕ್ಷ ನಾಗರಾಜ ನಾಯ್ಕ, ಕ್ಷೇತ್ರದ ಅಭಿವೃದ್ಧಿಗೆ ಸದಾ ಕೊಡುಗೆ ನೀಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಚುನಾವಣೆಯಲ್ಲಿ ಗೆಲ್ಲಬೇಕು. ನಂತರದ ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೂ ಏರಬೇಕು. ಇದರ ಜೊತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯದ ಉದ್ದೇಶಕ್ಕಾಗಿ ಪಾದಯಾತ್ರೆ ಸೇವೆ ಮಾಡುತ್ತಿದ್ದೇವೆ. ಮಂಜುಗುಣಿ ಕ್ಷೇತ್ರ ವೆಂಕಟರಮಣ ದೇವರ ನೆಲೆಯಿಂದಾಗಿ ಭಕ್ತರಿಗೆ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಬೇಡಿಕೊಂಡಿದ್ದು ಈಡೇರುವುದು ನಿಶ್ಚಿತ ಎಂದರು.