ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಪೊಲೀಸರ ಮೇಲೆ ಆಡಳಿತ ಪಕ್ಷ ಒತ್ತಡ ತರುತ್ತದೆ. ಅದರಿಂದ ತನಿಖೆಯ ದಾರಿ ತಪ್ಪುತ್ತದೆ ಎಂದರು.
ಪಾಕಿಸ್ತಾನ ಪರ ಘೋಷಣೆ ಕೂಗುವವರು ದೇಶದ ಪಾಲಿಗೆ ಕ್ಯಾನ್ಸರ್ ವೈರಸ್ ಇದ್ದಂತೆ. ಮೊದಲು ನಾಸಿರ್ ಹುಸೇನ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.
ಭಟ್ಕಳಕ್ಕೆ ಪಾಕಿಸ್ತಾನದ ನಂಟಿದೆ ಎಂದು ಜಗನ್ನಾಥ ಶೆಟ್ಟಿ ಆಯೋಗ ವರದಿ ನೀಡಿತ್ತು. ವರದಿಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಒಪ್ಪಲಿಲ್ಲ. ಬಿಜೆಪಿ, ಕಾಂಗ್ರೆಸ್'ಗೆ ಹೆಚ್ಚು ವ್ಯತ್ಯಾಸವಿಲ್ಲ ಎಂದರು.