<p><br> ಕುಮಟಾ: `ಗ್ರಾಮೀಣ ಭಾಗದ ಶಾಲೆಯಲ್ಲಿ ಶಿಕ್ಷಕರಾಗಿ ಹಾಗೂ ಸ್ಕೌಟ್ಸ್ ನಂತಹ ಶಿಸ್ತುಬದ್ಧ ಸಂಘಟನೆಯ ನೇತೃತ್ವ ವಹಿಸಿ ವಿದೇಶಗಳಿಗೆ ತೆರಳಿ ಸೇವೆ ಸಲ್ಲಿಸಿದ ಅನುಭವ ರಾಜು ನಾಯ್ಕ ಅವರಲ್ಲಿದೆ. ಈ ದಟ್ಟ ಅನುಭವದಿಂದ ವಿಶಿಷ್ಟ ಕವಿತ್ವ ಹೊರ ಹೊಮ್ಮಲು ಕಾರಣವಾಗಿದೆ' ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರೋಹಿದಾಸ ನಾಯಕ ಹೇಳಿದರು.</p>.<p>ತಾಲ್ಲೂಕಿನ ಮಿರ್ಜಾನ ಪ್ರೌಢಶಾಲೆಯಲ್ಲಿ ನಿವೃತ್ತ ಶಿಕ್ಷಕ ರಾಜು ನಾಯ್ಕ ಅವರ `ಹೊಗೆ' ಕವನ ಸಂಕಲನ ಈಚೆಗೆ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಪಿ.ಆರ್. ನಾಯ್ಕ, ` ಹೊಸ ತಲೆಮಾರಿನ ಓದುಗರು ಹಾಗೂ ಬರಹಗಾರರನ್ನು ರಾಜು ನಾಯ್ಕ ಕವಿತೆಗಳು ಪ್ರಭಾವಿಸುವ ಸಾಮರ್ಥ್ಯ ಹೊಂದಿವೆೆ' ಎಂದರು.</p>.<p>ನಿವೃತ್ತ ಮುಖ್ಯ ಶಿಕ್ಷಕ ಎನ್.ಆರ್. ಗಜು, ` ಓದು ಮಾಯವಾಗುತ್ತಿರುವ ಇಂದಿನ ದಿನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಆಸಕ್ತರು ಸಂಭ್ರಮಿಸುತ್ತಿರುವುದು ಮೆಚ್ಚುಗೆಯ ಬೆಳವಣಿಗೆ' ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಪ್ರಮೋದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕವಿ ರಾಜು ನಾಯ್ಕ ಕವಿತೆ ರಚನೆಗೆ ತಾವು ಒಳಗಾದ ಪ್ರೇರಣೆಯ ಬಗ್ಗೆ ಅನಿಸಿಕೆ ಹಂಚಿಕೊಂಡರು.</p>.<p>ಶಾಲೆಯ ಮುಖ್ಯ ಶಿಕ್ಷಕಿ ಉಮಾ ಹೆಗಡೆ, ಶಿಕ್ಷಕರಾದ ವಿಷ್ಣು ಹೆಬ್ಬಾರ, ಕಲ್ಪನಾ ನಾಯಕ,ವಿಜಕುಮಾರ ನಾಯಕ, ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಕೃಷ್ಣ ಮಾಲಿಗದ್ದೆ, ಸಾಹಿತಿ ಸಾತು ಗೌಡ, ಶಾಲಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಗುನಗ, ಜಿ.ಆರ್. ಮಡಿವಾಳ. ಸೌಮ್ಯಾ ಕೊಡಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br> ಕುಮಟಾ: `ಗ್ರಾಮೀಣ ಭಾಗದ ಶಾಲೆಯಲ್ಲಿ ಶಿಕ್ಷಕರಾಗಿ ಹಾಗೂ ಸ್ಕೌಟ್ಸ್ ನಂತಹ ಶಿಸ್ತುಬದ್ಧ ಸಂಘಟನೆಯ ನೇತೃತ್ವ ವಹಿಸಿ ವಿದೇಶಗಳಿಗೆ ತೆರಳಿ ಸೇವೆ ಸಲ್ಲಿಸಿದ ಅನುಭವ ರಾಜು ನಾಯ್ಕ ಅವರಲ್ಲಿದೆ. ಈ ದಟ್ಟ ಅನುಭವದಿಂದ ವಿಶಿಷ್ಟ ಕವಿತ್ವ ಹೊರ ಹೊಮ್ಮಲು ಕಾರಣವಾಗಿದೆ' ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರೋಹಿದಾಸ ನಾಯಕ ಹೇಳಿದರು.</p>.<p>ತಾಲ್ಲೂಕಿನ ಮಿರ್ಜಾನ ಪ್ರೌಢಶಾಲೆಯಲ್ಲಿ ನಿವೃತ್ತ ಶಿಕ್ಷಕ ರಾಜು ನಾಯ್ಕ ಅವರ `ಹೊಗೆ' ಕವನ ಸಂಕಲನ ಈಚೆಗೆ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಪಿ.ಆರ್. ನಾಯ್ಕ, ` ಹೊಸ ತಲೆಮಾರಿನ ಓದುಗರು ಹಾಗೂ ಬರಹಗಾರರನ್ನು ರಾಜು ನಾಯ್ಕ ಕವಿತೆಗಳು ಪ್ರಭಾವಿಸುವ ಸಾಮರ್ಥ್ಯ ಹೊಂದಿವೆೆ' ಎಂದರು.</p>.<p>ನಿವೃತ್ತ ಮುಖ್ಯ ಶಿಕ್ಷಕ ಎನ್.ಆರ್. ಗಜು, ` ಓದು ಮಾಯವಾಗುತ್ತಿರುವ ಇಂದಿನ ದಿನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಆಸಕ್ತರು ಸಂಭ್ರಮಿಸುತ್ತಿರುವುದು ಮೆಚ್ಚುಗೆಯ ಬೆಳವಣಿಗೆ' ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಪ್ರಮೋದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕವಿ ರಾಜು ನಾಯ್ಕ ಕವಿತೆ ರಚನೆಗೆ ತಾವು ಒಳಗಾದ ಪ್ರೇರಣೆಯ ಬಗ್ಗೆ ಅನಿಸಿಕೆ ಹಂಚಿಕೊಂಡರು.</p>.<p>ಶಾಲೆಯ ಮುಖ್ಯ ಶಿಕ್ಷಕಿ ಉಮಾ ಹೆಗಡೆ, ಶಿಕ್ಷಕರಾದ ವಿಷ್ಣು ಹೆಬ್ಬಾರ, ಕಲ್ಪನಾ ನಾಯಕ,ವಿಜಕುಮಾರ ನಾಯಕ, ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಕೃಷ್ಣ ಮಾಲಿಗದ್ದೆ, ಸಾಹಿತಿ ಸಾತು ಗೌಡ, ಶಾಲಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಗುನಗ, ಜಿ.ಆರ್. ಮಡಿವಾಳ. ಸೌಮ್ಯಾ ಕೊಡಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>