<p><strong>ಶಿರಸಿ:</strong> ’ಯಾವುದೇ ಕೃತಿ, ಸಂಗತಿಯು ವರ್ತಮಾನಕ್ಕೆ ಅನ್ವಯಿಸುವಂತೆ ಇದ್ದರೆ ಯಾವುದೇ ಕಾಲಕ್ಕೂ ಪ್ರಸ್ತುತವಾಗಿರುತ್ತದೆ’ ಎಂದು ಲೇಖಕ, ಅರ್ಥಧಾರಿ ನಾರಾಯಣ ಯಾಜಿ ಹೇಳಿದರು.</p>.<p>ತಾಲ್ಲೂಕಿನ ಯಡಳ್ಳಿಯ ಸುಕರ್ಮ ಸಭಾಂಗಣದಲ್ಲಿ ಭಾನುವಾರ ನಡೆದ ನಿವೃತ್ತ ಪ್ರಾಚಾರ್ಯ ಆರ್.ಎಸ್.ಹೆಗಡೆ ಬೆಳ್ಳೇಕೇರಿ ಅವರು ಬರೆದ ‘ಪುರುಷ ಸೂಕ್ತ’ ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘92 ವರ್ಷದ ಬೆಳ್ಳೇಕೇರಿ ಅವರ ತಪಸ್ಸಿನ ಫಲವೇ ಈ ಕೃತಿ. ಜ್ಞಾನ, ವಿಜ್ಞಾನದ ಮೇಲೂ ಇಲ್ಲಿ ಅರ್ಥೈಸಲಾಗಿದೆ. ಮೋಕ್ಷದ ದಾರಿಯ ಬಗ್ಗೆಯೂ ಕೃತಿಯಲ್ಲಿ ಸಾರಲಾಗಿದೆ’ ಎಂದರು.</p>.<p>ಕೃತಿ ಬಿಡುಗಡೆಗೊಳಿಸಿದ ವಿದ್ವಾನ್ ಶಂಕರ ಭಟ್ ಬಾಲಿಗದ್ದೆ ಮಾತನಾಡಿ, ‘ಹೊಸ ಅರ್ಥದಲ್ಲಿ ಪ್ರಕಾಶಿಸುವ ಸಾಮರ್ಥ್ಯ ವೇದ ಮಂತ್ರಗಳಿಗೆ ಇದೆ’ ಎಂದರು.</p>.<p>ಹಿರಿಯ ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ, ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ, ಚಿತ್ರಕಾರ ಸತೀಶ ಯಲ್ಲಾಪುರ ಮಾತನಾಡಿದರು. ರಘುಪತಿ ಯಾಜಿ ಪ್ರಕಾಶನದ ಕುರಿತು ಮಾತನಾಡಿದರು. </p>.<p>ನಿವೃತ್ತ ಪ್ರಾಚಾರ್ಯ ಆರ್.ಎಸ್.ಹೆಗಡೆ ಬೆಳ್ಳೇಕೇರಿ ಅಧ್ಯಕ್ಷತೆ ವಹಿಸಿದ್ದರು. ಕಿಶೋರ ಹೆಗಡೆ ಸ್ವಾಗತಿಸಿದರು. ವೆಂಕಟಾಚಲ ಭಟ್ ಕರಸುಳ್ಳಿ ನಿರ್ವಹಿಸಿದರು. ಆರ್.ಟಿ.ಭಟ್ ವಂದಿಸಿದರು. ಪುರುಷ ಸೂಕ್ತದ ಮಂತ್ರಘೋಷ ನಡೆಸಲಾಯಿತು.</p>.<p>ಕೃತಿ: ಪುರುಷ ಸೂಕ್ತ</p><p>ಕೃತಿಕಾರ: ಆರ್.ಎಸ್.ಹೆಗಡೆ ಬೆಳ್ಳೇಕೇರಿ</p><p>ಪ್ರಕಾಶನ: ಯಾಜಿ ಪ್ರಕಾಶನ ಹೊಸಪೇಟೆ</p><p>ಪುಟ: 176</p><p>ಬೆಲೆ: ₹250</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ’ಯಾವುದೇ ಕೃತಿ, ಸಂಗತಿಯು ವರ್ತಮಾನಕ್ಕೆ ಅನ್ವಯಿಸುವಂತೆ ಇದ್ದರೆ ಯಾವುದೇ ಕಾಲಕ್ಕೂ ಪ್ರಸ್ತುತವಾಗಿರುತ್ತದೆ’ ಎಂದು ಲೇಖಕ, ಅರ್ಥಧಾರಿ ನಾರಾಯಣ ಯಾಜಿ ಹೇಳಿದರು.</p>.<p>ತಾಲ್ಲೂಕಿನ ಯಡಳ್ಳಿಯ ಸುಕರ್ಮ ಸಭಾಂಗಣದಲ್ಲಿ ಭಾನುವಾರ ನಡೆದ ನಿವೃತ್ತ ಪ್ರಾಚಾರ್ಯ ಆರ್.ಎಸ್.ಹೆಗಡೆ ಬೆಳ್ಳೇಕೇರಿ ಅವರು ಬರೆದ ‘ಪುರುಷ ಸೂಕ್ತ’ ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘92 ವರ್ಷದ ಬೆಳ್ಳೇಕೇರಿ ಅವರ ತಪಸ್ಸಿನ ಫಲವೇ ಈ ಕೃತಿ. ಜ್ಞಾನ, ವಿಜ್ಞಾನದ ಮೇಲೂ ಇಲ್ಲಿ ಅರ್ಥೈಸಲಾಗಿದೆ. ಮೋಕ್ಷದ ದಾರಿಯ ಬಗ್ಗೆಯೂ ಕೃತಿಯಲ್ಲಿ ಸಾರಲಾಗಿದೆ’ ಎಂದರು.</p>.<p>ಕೃತಿ ಬಿಡುಗಡೆಗೊಳಿಸಿದ ವಿದ್ವಾನ್ ಶಂಕರ ಭಟ್ ಬಾಲಿಗದ್ದೆ ಮಾತನಾಡಿ, ‘ಹೊಸ ಅರ್ಥದಲ್ಲಿ ಪ್ರಕಾಶಿಸುವ ಸಾಮರ್ಥ್ಯ ವೇದ ಮಂತ್ರಗಳಿಗೆ ಇದೆ’ ಎಂದರು.</p>.<p>ಹಿರಿಯ ವಿದ್ವಾಂಸ ಉಮಾಕಾಂತ ಭಟ್ ಕೆರೇಕೈ, ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ, ಚಿತ್ರಕಾರ ಸತೀಶ ಯಲ್ಲಾಪುರ ಮಾತನಾಡಿದರು. ರಘುಪತಿ ಯಾಜಿ ಪ್ರಕಾಶನದ ಕುರಿತು ಮಾತನಾಡಿದರು. </p>.<p>ನಿವೃತ್ತ ಪ್ರಾಚಾರ್ಯ ಆರ್.ಎಸ್.ಹೆಗಡೆ ಬೆಳ್ಳೇಕೇರಿ ಅಧ್ಯಕ್ಷತೆ ವಹಿಸಿದ್ದರು. ಕಿಶೋರ ಹೆಗಡೆ ಸ್ವಾಗತಿಸಿದರು. ವೆಂಕಟಾಚಲ ಭಟ್ ಕರಸುಳ್ಳಿ ನಿರ್ವಹಿಸಿದರು. ಆರ್.ಟಿ.ಭಟ್ ವಂದಿಸಿದರು. ಪುರುಷ ಸೂಕ್ತದ ಮಂತ್ರಘೋಷ ನಡೆಸಲಾಯಿತು.</p>.<p>ಕೃತಿ: ಪುರುಷ ಸೂಕ್ತ</p><p>ಕೃತಿಕಾರ: ಆರ್.ಎಸ್.ಹೆಗಡೆ ಬೆಳ್ಳೇಕೇರಿ</p><p>ಪ್ರಕಾಶನ: ಯಾಜಿ ಪ್ರಕಾಶನ ಹೊಸಪೇಟೆ</p><p>ಪುಟ: 176</p><p>ಬೆಲೆ: ₹250</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>